ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

Last Updated 2 ಅಕ್ಟೋಬರ್ 2019, 12:57 IST
ಅಕ್ಷರ ಗಾತ್ರ

ಮಂಡ್ಯ: ಮೈಸೂರು ದಸರಾ ವೈಮಾನಿಕ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಭಾರತೀಯ ವಾಯು ಪಡೆಗೆ ಸೇರಿದ ಹೆಲಿಕಾಪ್ಟರ್‌ ತಾಂತ್ರಿಕ ದೋಷದ ಕಾರಣದಿಂದ ಶ್ರೀರಂಗಪಟ್ಟಣ ತಾಲ್ಲೂಕು ಮಹದೇವಪುರ ಬೋರೆಯ ಬಳಿ ಬುಧವಾರ ತುರ್ತು ಭೂಸ್ಪರ್ಶ ಮಾಡಿತು.

ಬೆಂಗಳೂರಿನ ಯಲಹಂಕ ವಾಯುನೆಲೆಯಿಂದ ಹೆಲಿಕಾಪ್ಟರ್‌ ಎಂಐ–17 ಹೊರಟಿತ್ತು. ಶ್ರೀರಂಗಪಟ್ಟಣ ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹದೇವಪುರ ಸಮೀಪದ ಬೋರೆಯ ಮೈದಾನದಲ್ಲಿ ಭೂ ಸ್ಪರ್ಶ ಮಾಡಿತು. ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿಗೆ ಯಾವುದೇ ಅಪಾಯಗಳಾಗಿಲ್ಲ.

ಬೆಂಗಳೂರಿನಿಂದ ಬಂದ ಭಾರತೀಯ ವಾಯು ಪಡೆ ತಂತ್ರಜ್ಞರು ಹೆಲಿಕಾಪ್ಟರ್‌ ಪರಿಶೀಲನೆ ನಡೆಸಿದರು. ಸ್ಥಳೀಯ ಪೊಲೀಸರು ಭದ್ರತೆ ಒದಗಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT