<p><strong>ಮಂಡ್ಯ:</strong> ‘ನಾಡು, ನುಡಿ, ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಉಳಿಸುವಂತಹ ಕೆಲಸದಲ್ಲಿ ಆಕಾಶವಾಣಿ ಕೊಡುಗೆ ಮಹತ್ವದ್ದಾಗಿದೆ’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮೈಸೂರು ಆಕಾಶವಾಣಿ-90 ಭಾವ ಜನಪದ ರಂಗ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದರು.</p>.<p>ಮೈಸೂರಿನ ಆಕಾಶವಾಣಿಯನ್ನು 1935 ಮನಶಾಸ್ತ್ರದ ಪ್ರೊಫೆಸರ್ ಗೋಪಾಲಸ್ವಾಮಿ ಅವರು ಪ್ರಾರಂಭಗೊಳಿಸಿದರು. ವೈವಿಧ್ಯಮಯ ಮತ್ತು ಗುಣಮಟ್ಟದ ಕಾರ್ಯಕ್ರಮಗಳ ಮೂಲಕ ಆಕಾಶವಾಣಿ ಜನರ ಮನಸ್ಸನ್ನು ಸೆಳೆದಿದೆ ಎಂದರು.</p>.<p>ತಾಂತ್ರಿಕ ಯುಗದಲ್ಲಿ ಆಕಾಶವಾಣಿ ಪ್ರಾತಿನಿಧ್ಯ ಮತ್ತು ಮಹತ್ವ ಕಡಿಮೆ ಆಗಿದೆ ಎನ್ನಿಸುತ್ತಿದೆ. ಆದರೆ ಇಂದು ಸಹ ಆಕಾಶವಾಣಿಯ ಕಾರ್ಯಕ್ರಮಗಳು ಜನಪರ ಕಾರ್ಯಕ್ರಮಗಳಾಗಿವೆ. ವಿಶೇಷವಾಗಿ ಕಲಾವಿದರನ್ನು ಪ್ರೋತ್ಸಾಹಿಸುವಂತಹ ಮತ್ತು ಗ್ರಾಮೀಣ ಬದುಕಿನ ಜನರ ಸೊಗಡಿನ ಕಾರ್ಯಕ್ರಮಗಳು ಹೆಚ್ಚು ಉಪಯುಕ್ತವಾಗಿವೆ ಎಂದರು. </p>.<p>ಕರ್ನಾಟಕದ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ, ಮೈಸೂರು ಆಕಾಶವಾಣಿ ಉಪನಿರ್ದೇಶಕ ಉಮೇಶ್ ಎಸ್.ಎಸ್., ಸಹಾಯಕ ನಿರ್ದೇಶಕರಾದ ಟಿ.ವಿ. ವಿದ್ಯಾಶಂಕರ್, ಕೇಶವಮೂರ್ತಿ, ಸಹಾಯಕ ಎಂಜಿನಿಯರ್ ಪಿ. ಆನಂದನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಂದೀಶ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ನಾಡು, ನುಡಿ, ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಉಳಿಸುವಂತಹ ಕೆಲಸದಲ್ಲಿ ಆಕಾಶವಾಣಿ ಕೊಡುಗೆ ಮಹತ್ವದ್ದಾಗಿದೆ’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮೈಸೂರು ಆಕಾಶವಾಣಿ-90 ಭಾವ ಜನಪದ ರಂಗ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದರು.</p>.<p>ಮೈಸೂರಿನ ಆಕಾಶವಾಣಿಯನ್ನು 1935 ಮನಶಾಸ್ತ್ರದ ಪ್ರೊಫೆಸರ್ ಗೋಪಾಲಸ್ವಾಮಿ ಅವರು ಪ್ರಾರಂಭಗೊಳಿಸಿದರು. ವೈವಿಧ್ಯಮಯ ಮತ್ತು ಗುಣಮಟ್ಟದ ಕಾರ್ಯಕ್ರಮಗಳ ಮೂಲಕ ಆಕಾಶವಾಣಿ ಜನರ ಮನಸ್ಸನ್ನು ಸೆಳೆದಿದೆ ಎಂದರು.</p>.<p>ತಾಂತ್ರಿಕ ಯುಗದಲ್ಲಿ ಆಕಾಶವಾಣಿ ಪ್ರಾತಿನಿಧ್ಯ ಮತ್ತು ಮಹತ್ವ ಕಡಿಮೆ ಆಗಿದೆ ಎನ್ನಿಸುತ್ತಿದೆ. ಆದರೆ ಇಂದು ಸಹ ಆಕಾಶವಾಣಿಯ ಕಾರ್ಯಕ್ರಮಗಳು ಜನಪರ ಕಾರ್ಯಕ್ರಮಗಳಾಗಿವೆ. ವಿಶೇಷವಾಗಿ ಕಲಾವಿದರನ್ನು ಪ್ರೋತ್ಸಾಹಿಸುವಂತಹ ಮತ್ತು ಗ್ರಾಮೀಣ ಬದುಕಿನ ಜನರ ಸೊಗಡಿನ ಕಾರ್ಯಕ್ರಮಗಳು ಹೆಚ್ಚು ಉಪಯುಕ್ತವಾಗಿವೆ ಎಂದರು. </p>.<p>ಕರ್ನಾಟಕದ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ, ಮೈಸೂರು ಆಕಾಶವಾಣಿ ಉಪನಿರ್ದೇಶಕ ಉಮೇಶ್ ಎಸ್.ಎಸ್., ಸಹಾಯಕ ನಿರ್ದೇಶಕರಾದ ಟಿ.ವಿ. ವಿದ್ಯಾಶಂಕರ್, ಕೇಶವಮೂರ್ತಿ, ಸಹಾಯಕ ಎಂಜಿನಿಯರ್ ಪಿ. ಆನಂದನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಂದೀಶ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>