ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳು ಮಲಿನಗೊಂಡಿದ್ದರ ಕುರಿತು ರಾಜ್ಯಸಭೆ ಸದಸ್ಯ ಕುಪೇಂದ್ರ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜವಾದ್ ರಹೀಂ ನೇತೃತ್ವದ ಪೀಠವು, ಕೆರೆಗಳ ಶುದ್ಧೀಕರಣ ಕುರಿತಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಗಳಲ್ಲಿ ಜಲಾನಯನ ಪ್ರದೇಶದ ಶುಚಿತ್ವ ಕುರಿತು ಕ್ರಿಯಾ ಯೋಜನೆ ರೂಪಿಸುವಂತೆ ಹೇಳಿತು.