‘ಅಂಬೇಡ್ಕರ್ ಅವರು ಅನೇಕ ದೇಶಗಳಿಗೆ ಭೇಟಿ ನೀಡಿ ಅಲ್ಲಿನ ಕಾನೂನುಗಳು ಹಾಗೂ ಸಂವಿಧಾನದ ಬಗ್ಗೆ ಜ್ಞಾನ ಪಡೆದುಕೊಂಡರು. ನಮಗೆ ಹಕ್ಕುಗಳ ಬಗ್ಗೆ ಸಂಪೂರ್ಣವಾಗಿ ಅರಿವಿರಬೇಕು ಆಗ ಮಾತ್ರ ಹಕ್ಕುಗಳನ್ನು ಕುರಿತು ಪ್ರಶ್ನೆ ಮಾಡಲು, ರಕ್ಷಣೆ ಮಾಡಲು ಸಾಧ್ಯ. ಇದಕ್ಕೆ ಶಿಕ್ಷಣ ಒಂದೇ ದಾರಿ ಎಂಬುದನ್ನು ಅಂಬೇಡ್ಕರ್ ಅವರು ಅರಿತು ಲಂಡನ್ , ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅನೇಕ ಪದವಿಗಳನ್ನು ಪಡೆದುಕೊಂಡರು, ಇದು ಇತರರಿಗೂ ದಾರಿ ದೀಪ’ ಎಂದರು.