<p><strong>ಮಂಡ್ಯ:</strong> ವಿವಿಧ ಸಂಘಟನೆಯ ಮುಖಂಡರು ನಗರದ 100 ಅಡಿ ರಸ್ತೆಗೆ ಬಿ.ಆರ್.ಅಂಬೇಡ್ಕರ್ ಅವರ ಹೆಸರಿರುವ ನಾಮಫಲಕದ ಕಲ್ಲನ್ನು ಸೋಮವಾರ ನೆಟ್ಟರು.</p>.<p>ಸಮಾನ ಮನಸ್ಕರ ವೇದಿಕೆ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ ಮಾತನಾಡಿ, ‘1975ರಿಂದಲೂ ನೂರಡಿ ರಸ್ತೆಗೆ ‘ಅಂಬೇಡ್ಕರ್ ರಸ್ತೆ’ ಎಂದು ನಾಮಕರಣ ಮಾಡಲು ಅಂದಿನ ನಗರಸಭೆಯು ನಿರ್ಣಯ ಮಾಡಿ ಅಂಗೀಕರಿಸಿತ್ತು. ಆದರೆ, ರಾಜಕೀಯ ಪಕ್ಷಗಳ ಇಚ್ಛಾಶಕ್ತಿಯ ಕೊರತೆಯಿಂದ ಅದು ಸಾಧ್ಯವಾಗಿರಲಿಲ್ಲ’ ಎಂದು ಆರೋಪಿಸಿದರು.</p>.<p>ಮಂಡ್ಯದ ಸಮಾನ ಮನಸ್ಕರ ವೇದಿಕೆ, ದಲಿತ, ಪ್ರಗತಿಪರ ಸಂಘಟನೆಗಳ ಜೊತೆ ಈಚೆಗೆ ಅಂಬೇಡ್ಕರ್ ರಸ್ತೆ ಎಂಬ ಹೆಸರಿನ ಸ್ಟಿಕ್ಕರ್ಗಳನ್ನು ಅಂಟಿಸಿ ನಗರಾಡಳಿತದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಆದರೆ ಈ ಸ್ಟಿಕ್ಕರ್ಗಳನ್ನು ಪೋಲಿಸರು ರಾತ್ರೋರಾತ್ರಿ ತರವುಗೊಳಿಸಿದ್ದಾರೆ. ಈ ಕ್ರಮಕ್ಕೆ ಸೆಡ್ಡು ಹೊಡೆದು ಅಂಬೇಡ್ಕರ್ ನಾಮಫಲಕದ ಕಲ್ಲು ನೆಟ್ಟಿದ್ದೇವೆ’ ಎಂದು ತಿಳಿಸಿದರು.</p>.<p>ವಿವಿಧ ಸಂಘಟನೆಯ ಮುಖಂಡರಾದ ಎಂ.ವಿ.ಕೃಷ್ಣ, ಶಂಕರಪ್ಪಗೌಡ ನರಸಿಂಹಮೂರ್ತಿ, ಹನಕೆರೆ ಅಭಿಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ವಿವಿಧ ಸಂಘಟನೆಯ ಮುಖಂಡರು ನಗರದ 100 ಅಡಿ ರಸ್ತೆಗೆ ಬಿ.ಆರ್.ಅಂಬೇಡ್ಕರ್ ಅವರ ಹೆಸರಿರುವ ನಾಮಫಲಕದ ಕಲ್ಲನ್ನು ಸೋಮವಾರ ನೆಟ್ಟರು.</p>.<p>ಸಮಾನ ಮನಸ್ಕರ ವೇದಿಕೆ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ ಮಾತನಾಡಿ, ‘1975ರಿಂದಲೂ ನೂರಡಿ ರಸ್ತೆಗೆ ‘ಅಂಬೇಡ್ಕರ್ ರಸ್ತೆ’ ಎಂದು ನಾಮಕರಣ ಮಾಡಲು ಅಂದಿನ ನಗರಸಭೆಯು ನಿರ್ಣಯ ಮಾಡಿ ಅಂಗೀಕರಿಸಿತ್ತು. ಆದರೆ, ರಾಜಕೀಯ ಪಕ್ಷಗಳ ಇಚ್ಛಾಶಕ್ತಿಯ ಕೊರತೆಯಿಂದ ಅದು ಸಾಧ್ಯವಾಗಿರಲಿಲ್ಲ’ ಎಂದು ಆರೋಪಿಸಿದರು.</p>.<p>ಮಂಡ್ಯದ ಸಮಾನ ಮನಸ್ಕರ ವೇದಿಕೆ, ದಲಿತ, ಪ್ರಗತಿಪರ ಸಂಘಟನೆಗಳ ಜೊತೆ ಈಚೆಗೆ ಅಂಬೇಡ್ಕರ್ ರಸ್ತೆ ಎಂಬ ಹೆಸರಿನ ಸ್ಟಿಕ್ಕರ್ಗಳನ್ನು ಅಂಟಿಸಿ ನಗರಾಡಳಿತದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಆದರೆ ಈ ಸ್ಟಿಕ್ಕರ್ಗಳನ್ನು ಪೋಲಿಸರು ರಾತ್ರೋರಾತ್ರಿ ತರವುಗೊಳಿಸಿದ್ದಾರೆ. ಈ ಕ್ರಮಕ್ಕೆ ಸೆಡ್ಡು ಹೊಡೆದು ಅಂಬೇಡ್ಕರ್ ನಾಮಫಲಕದ ಕಲ್ಲು ನೆಟ್ಟಿದ್ದೇವೆ’ ಎಂದು ತಿಳಿಸಿದರು.</p>.<p>ವಿವಿಧ ಸಂಘಟನೆಯ ಮುಖಂಡರಾದ ಎಂ.ವಿ.ಕೃಷ್ಣ, ಶಂಕರಪ್ಪಗೌಡ ನರಸಿಂಹಮೂರ್ತಿ, ಹನಕೆರೆ ಅಭಿಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>