<p><strong>ಮಂಡ್ಯ:</strong> ಹಾವೇರಿ ಜಿಲ್ಲೆಯ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ಅಂಬಿಗರ ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥಿ ಮಹಾ ರಥೋತ್ಸವವು ಜ.14, 15 ರಂದು ನಡೆಯಲಿದೆ ಎಂದು ಗುರುಪೀಠದ ಶಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು.</p>.<p>ಜ.14 ರಂದು ಬೆಳಿಗ್ಗೆ 6 ಗಂಟೆಗೆ ನಿಜಶರಣ ಅಂಬಿಗರ ಚೌಡಯ್ಯನವರ ತೊಟ್ಟಿಲೋತ್ಸವ, ಐಕ್ಯಮಂಟಪ ಪೂಜೆ, ಸಾಮೂಹಿಕ ರಕ್ತದಾನ, ಸರಳ ವಿವಾಹ, ಪ್ರತಿಭಾ ಪುರಸ್ಕಾರ, ಕಂಠಪಾಠ ಸ್ಪರ್ಧೆ, ಗಂಗಾರತಿ, ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ, ಲಿಂಗೈಕ್ಯ ಶಾಂತಮುನಿ ಸ್ವಾಮೀಜಿ ಹತ್ತನೇ ಸ್ಮರಣೋತ್ಸವ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.</p>.<p>ಜ.15 ರಂದು ಬೆಳಿಗ್ಗೆ 8 ಗಂಟೆಗೆ ಧರ್ಮ ಧ್ವಜಾರೋಹಣ, ಧರ್ಮಸಭೆ, ಚೌಡಯ್ಯನವರ ಶಿಲಾಮಂಟಪ, ಅಡಿ ಎತ್ತರದ ಕಂಚಿನ ಪುತ್ಥಳಿ ಲೋಕಾರ್ಪಣೆ, ಮಹರ್ಷಿ ವೇದವ್ಯಾಸ ಕಲ್ಯಾಣ ಮಂಟಪ ಉದ್ಘಾಟನೆ, ಅಂಬಿಗರ ಚೌಡಯ್ಯಅವರ ಜಯಂತ್ಯುತ್ಸವ, ಶಾಂತಭೀಷ್ಮಚೌಡಯ್ಯ ಸ್ವಾಮೀಜಿಗಳ ಪೀಠಾರೋಹಣ ದಶಮಾನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ವಿವಾಹದ ಕುರಿತು ಆಸಕ್ತರು ಜ.1 ರೊಳಗೆ ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕೆ ಜ.5 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಮಠದ ನಿರ್ದೇಶಕ ಬಸವರಾಜ ಸಪ್ಪನಗೋಳ, ಗಂಗಾಮತಸ್ತ(ಬೆಸ್ತರ್) ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರಮೇಶ್, ಗಂಗಾಮತಸ್ತರ ಸರ್ಕಾರಿ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷ ಕೃಷ್ಣಯ್ಯ, ಮುಖಂಡರಾದ ವೀರಣ್ಣ, ಎಂ.ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಹಾವೇರಿ ಜಿಲ್ಲೆಯ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ಅಂಬಿಗರ ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥಿ ಮಹಾ ರಥೋತ್ಸವವು ಜ.14, 15 ರಂದು ನಡೆಯಲಿದೆ ಎಂದು ಗುರುಪೀಠದ ಶಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು.</p>.<p>ಜ.14 ರಂದು ಬೆಳಿಗ್ಗೆ 6 ಗಂಟೆಗೆ ನಿಜಶರಣ ಅಂಬಿಗರ ಚೌಡಯ್ಯನವರ ತೊಟ್ಟಿಲೋತ್ಸವ, ಐಕ್ಯಮಂಟಪ ಪೂಜೆ, ಸಾಮೂಹಿಕ ರಕ್ತದಾನ, ಸರಳ ವಿವಾಹ, ಪ್ರತಿಭಾ ಪುರಸ್ಕಾರ, ಕಂಠಪಾಠ ಸ್ಪರ್ಧೆ, ಗಂಗಾರತಿ, ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ, ಲಿಂಗೈಕ್ಯ ಶಾಂತಮುನಿ ಸ್ವಾಮೀಜಿ ಹತ್ತನೇ ಸ್ಮರಣೋತ್ಸವ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.</p>.<p>ಜ.15 ರಂದು ಬೆಳಿಗ್ಗೆ 8 ಗಂಟೆಗೆ ಧರ್ಮ ಧ್ವಜಾರೋಹಣ, ಧರ್ಮಸಭೆ, ಚೌಡಯ್ಯನವರ ಶಿಲಾಮಂಟಪ, ಅಡಿ ಎತ್ತರದ ಕಂಚಿನ ಪುತ್ಥಳಿ ಲೋಕಾರ್ಪಣೆ, ಮಹರ್ಷಿ ವೇದವ್ಯಾಸ ಕಲ್ಯಾಣ ಮಂಟಪ ಉದ್ಘಾಟನೆ, ಅಂಬಿಗರ ಚೌಡಯ್ಯಅವರ ಜಯಂತ್ಯುತ್ಸವ, ಶಾಂತಭೀಷ್ಮಚೌಡಯ್ಯ ಸ್ವಾಮೀಜಿಗಳ ಪೀಠಾರೋಹಣ ದಶಮಾನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ವಿವಾಹದ ಕುರಿತು ಆಸಕ್ತರು ಜ.1 ರೊಳಗೆ ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕೆ ಜ.5 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಮಠದ ನಿರ್ದೇಶಕ ಬಸವರಾಜ ಸಪ್ಪನಗೋಳ, ಗಂಗಾಮತಸ್ತ(ಬೆಸ್ತರ್) ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರಮೇಶ್, ಗಂಗಾಮತಸ್ತರ ಸರ್ಕಾರಿ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷ ಕೃಷ್ಣಯ್ಯ, ಮುಖಂಡರಾದ ವೀರಣ್ಣ, ಎಂ.ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>