ತಪ್ಪು ಕಲ್ಪನೆ:
‘ಅಲ್ಪಸಂಖ್ಯಾತರ ಹಕ್ಕನ್ನು ಲಿಂಗಾಯತರು ಕಸಿದುಕೊಳ್ಳಲು ಹೊರಟಿದ್ದಾರೆ ಎಂಬುದು ತಪ್ಪು ಕಲ್ಪನೆ. ಪ್ರತಿ ವರ್ಷ ಕೇಂದ್ರ ಸರ್ಕಾರ ನೀಡುತ್ತಿರುವ ₹ 1,600 ಕೋಟಿ ಖರ್ಚಾಗದೆ ವಾಪಸು ಹೋಗುತ್ತಿದೆ. ಧಾರ್ಮಿಕ ಅಲ್ಪಸಂಖ್ಯಾತರ ಸಂಖ್ಯೆ ಹೆಚ್ಚಾದರೆ, ಅನುದಾನದ ಪ್ರಮಾಣವೂ ಹೆಚ್ಚಾಗಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.