<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಕಿರುಗಾವಲು ಗ್ರಾಮದ ಯುವ ರೈತ ಉಲ್ಲಾಸ್ ಗೌಡ ಅವರು ಸಾಕಿದ್ದ ‘ಬಂಡೂರು’ ತಳಿಯ 8 ತಿಂಗಳ ಟಗರು ₹1.48 ಲಕ್ಷ ದಾಖಲೆ ಬೆಲೆಗೆ ಮಾರಾಟವಾಗಿದೆ.</p>.<p>ಉಲ್ಲಾಸ್ ಕೆಲ ತಿಂಗಳ ಹಿಂದೆ ಈ ಟಗರನ್ನು ₹50ಸಾವಿರಕ್ಕೆ ಖರೀದಿಸಿದ್ದರು. ಸದ್ಯ 20 ಕೆ.ಜಿ. ತೂಗುವ ಇದನ್ನು ಶಿವಮೊಗ್ಗದ ಜವಾದ್ ಎನ್ನುವವರು ಹೆಚ್ಚಿನ ಹಣ ನೀಡಿ ಕೊಂಡುಕೊಂಡಿದ್ದಾರೆ. ಟಗರಿಗೆ ವಿಶೇಷ ಪೂಜೆ ಮಾಡಿ ಮೆರವಣಿಗೆ ನಡೆಸಿದ ಕುಟುಂಬದವರು ಜವಾದ್ ಅವರಿಗೆ ಹಸ್ತಾಂತರಿಸಿದರು. ಅದನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದರು.</p>.<p>‘ಇಲ್ಲಿಂದಲೇ 30 ಕುರಿಗಳನ್ನು ಖರೀದಿಸಿದ್ದೇನೆ. ಈ ಟಗರಿನ ಮೂಲಕ ಬಂಡೂರು ತಳಿ ಅಭಿವೃದ್ಧಿಪಡಿಸುವ ಉದ್ದೇಶವಿದೆ’ ಎಂದು ಜವಾದ್ ತಿಳಿಸಿದರು.</p>.<p>‘ಕುರಿ ಸಾಕಣೆ ನಮಗೆ ಜೀವನಾಧಾರವಾಗಿದೆ. ಕುರಿ ಸಾಕುವುದನ್ನು ಕೀಳಾಗಿ ಕಾಣುವ ಸಮಾಜದಲ್ಲಿ, ಮಗ ಚಿಕ್ಕ ವಯಸ್ಸಿನಲ್ಲೇ ಓದಿನ ಜತೆಗೆ ಆದಾಯವನ್ನೂ ಗಳಿಸುತ್ತಿರುವುದು ಖುಷಿ ತಂದಿದೆ’ ಎಂದು ಉಲ್ಲಾಸ್ ಗೌಡ ಅವರ ತಂದೆ ಮನೋಹರ್ ಹೇಳಿದರು.</p>.<p>‘ಬಂಡೂರು ತಳಿ ಇತರ ಕುರಿಗಳಿಗಿಂತ ವಿಭಿನ್ನ. ಗಿಡ್ಡನೆಯ ಕಾಲು, ಉದ್ದವಾದ ದೇಹವನ್ನು ಹೊಂದಿರುತ್ತದೆ. ಈ ಮಾಂಸದ ಖಾದ್ಯ ಬಹಳ ರುಚಿಯಾಗಿರುತ್ತದೆ. ಈ ತಳಿಯ ಕುರಿಗಳು ಬೆರಳೆಣಿಕೆಯಷ್ಟು ಮಾತ್ರವೇ ಇವೆ. ಹಳ್ಳಿಗಳಲ್ಲಿ ಹುಡುಕುತ್ತಿರುತ್ತೇವೆ, ಸಿಕ್ಕಾಗ ತಂದು ಸಾಕುತ್ತಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಕಿರುಗಾವಲು ಗ್ರಾಮದ ಯುವ ರೈತ ಉಲ್ಲಾಸ್ ಗೌಡ ಅವರು ಸಾಕಿದ್ದ ‘ಬಂಡೂರು’ ತಳಿಯ 8 ತಿಂಗಳ ಟಗರು ₹1.48 ಲಕ್ಷ ದಾಖಲೆ ಬೆಲೆಗೆ ಮಾರಾಟವಾಗಿದೆ.</p>.<p>ಉಲ್ಲಾಸ್ ಕೆಲ ತಿಂಗಳ ಹಿಂದೆ ಈ ಟಗರನ್ನು ₹50ಸಾವಿರಕ್ಕೆ ಖರೀದಿಸಿದ್ದರು. ಸದ್ಯ 20 ಕೆ.ಜಿ. ತೂಗುವ ಇದನ್ನು ಶಿವಮೊಗ್ಗದ ಜವಾದ್ ಎನ್ನುವವರು ಹೆಚ್ಚಿನ ಹಣ ನೀಡಿ ಕೊಂಡುಕೊಂಡಿದ್ದಾರೆ. ಟಗರಿಗೆ ವಿಶೇಷ ಪೂಜೆ ಮಾಡಿ ಮೆರವಣಿಗೆ ನಡೆಸಿದ ಕುಟುಂಬದವರು ಜವಾದ್ ಅವರಿಗೆ ಹಸ್ತಾಂತರಿಸಿದರು. ಅದನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದರು.</p>.<p>‘ಇಲ್ಲಿಂದಲೇ 30 ಕುರಿಗಳನ್ನು ಖರೀದಿಸಿದ್ದೇನೆ. ಈ ಟಗರಿನ ಮೂಲಕ ಬಂಡೂರು ತಳಿ ಅಭಿವೃದ್ಧಿಪಡಿಸುವ ಉದ್ದೇಶವಿದೆ’ ಎಂದು ಜವಾದ್ ತಿಳಿಸಿದರು.</p>.<p>‘ಕುರಿ ಸಾಕಣೆ ನಮಗೆ ಜೀವನಾಧಾರವಾಗಿದೆ. ಕುರಿ ಸಾಕುವುದನ್ನು ಕೀಳಾಗಿ ಕಾಣುವ ಸಮಾಜದಲ್ಲಿ, ಮಗ ಚಿಕ್ಕ ವಯಸ್ಸಿನಲ್ಲೇ ಓದಿನ ಜತೆಗೆ ಆದಾಯವನ್ನೂ ಗಳಿಸುತ್ತಿರುವುದು ಖುಷಿ ತಂದಿದೆ’ ಎಂದು ಉಲ್ಲಾಸ್ ಗೌಡ ಅವರ ತಂದೆ ಮನೋಹರ್ ಹೇಳಿದರು.</p>.<p>‘ಬಂಡೂರು ತಳಿ ಇತರ ಕುರಿಗಳಿಗಿಂತ ವಿಭಿನ್ನ. ಗಿಡ್ಡನೆಯ ಕಾಲು, ಉದ್ದವಾದ ದೇಹವನ್ನು ಹೊಂದಿರುತ್ತದೆ. ಈ ಮಾಂಸದ ಖಾದ್ಯ ಬಹಳ ರುಚಿಯಾಗಿರುತ್ತದೆ. ಈ ತಳಿಯ ಕುರಿಗಳು ಬೆರಳೆಣಿಕೆಯಷ್ಟು ಮಾತ್ರವೇ ಇವೆ. ಹಳ್ಳಿಗಳಲ್ಲಿ ಹುಡುಕುತ್ತಿರುತ್ತೇವೆ, ಸಿಕ್ಕಾಗ ತಂದು ಸಾಕುತ್ತಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>