ಇದನ್ನು ನೋಡಿ ಗಾಬರಿಯಾದ ಅಮೂಲ್ಯಾ ತಾಯಿ ಅಂಗನವಾಡಿಗೆ ತಿಳಿಸಿದ್ದಾರೆ. ತಕ್ಷಣ ಎಲ್ಲಾ 10 ಮಕ್ಕಳನ್ನು ಸ್ಥಳೀಯ ಕ್ಯಾತುಂಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಅಮೂಲ್ಯಾಗೆ ಮಾತ್ರ ವಾಂತಿ ಕಾಣಿಸಿಕೊಂಡಿದ್ದು, ಉಳಿದ ಮಕ್ಕಳು ಆರೋಗ್ಯವಾಗಿದ್ದಾರೆ. ಅಮೂಲ್ಯಾಳ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಮಕ್ಕಳು ಸೇವಿಸಿದ ಆಹಾರ ಕಲುಷಿತವಾಗಿದೆಯೇ ಇಲ್ಲವೇ ಎಂಬುದು ತಿಳಿಯುತ್ತದೆ ಎಂದು ವೈದ್ಯರು ತಿಳಿಸಿದರು.