<p><strong>ಮಂಡ್ಯ:</strong> ಅಂಕೇಗೌಡ ಜ್ಞಾನ ಪ್ರತಿಷ್ಠಾನ ಪುಸ್ತಕ ಮನೆ ಗ್ರಂಥಾಲಯದ ಉಳಿವಿಗೆ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಸಹಾಯಹಸ್ತ ನೀಡಲು ಮುಂದಾಗಬೇಕು ಎಂದು ಗ್ರಂಥಾಲಯದ ವ್ಯವಸ್ಥಾಪಕ ಟ್ರಸ್ಟಿ ಎಂ.ಅಂಕೇಗೌಡ ಮನವಿ ಮಾಡಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಂಥಾಲಯದಲ್ಲಿ 20 ಲಕ್ಷಕ್ಕೂ ಅಧಿಕ ಪುಸ್ತಕಗಳಿದ್ದು, ನಿರ್ವಹಣೆ ಸಾಧ್ಯವಾಗದೇ 8 ಲಕ್ಷ ಪುಸ್ತಕಗಳು ನೆಲದ ಮೇಲೆ ಬಿದ್ದು ನೀರಿನಲ್ಲಿ ತೋಯ್ದಿವೆ, ಗೆದ್ದಲು ಸಮಸ್ಯೆಯಿಂದಾಗಿ ಹಾಳಾಗುತ್ತಿವೆ. ಆದ್ದರಿಂದ ಗ್ರಂಥಾಲಯದ ಕಟ್ಟಡ ಹಾಗೂ ಪುಸ್ತಕಗಳ ಸಮಗ್ರ ವರ್ಗೀಕರಣದ ಅವಶ್ಯಕತೆಯಾಗಿ ಆರ್ಥಿಕ ನೆರವು ನೀಡಲು ಮನವಿ ಮಾಡಿದರು.</p>.<p>ಕಳೆದ 30 ವರ್ಷಗಳಿಂದ ಪುಸ್ತಕ ಮನೆಯನ್ನು ನಿರ್ವಹಿಸುತ್ತಾ ನಡೆಸುತ್ತಿದ್ದೇನೆ. ಗ್ರಂಥಾಲಯಕ್ಕೆ ರಾಜ್ಯೋತ್ಸವ ಪ್ರಶಸ್ತಿ, ಲಿಮ್ಕಾ ಬುಕ್ ಆಫ್ ರೆಕಾರ್ಡ್, ವರ್ಲ್ಡ್ ರೆಕಾರ್ಡ್, ಆಳ್ವಾಸ್ ನುಡಿ ಸಿರಿ ಪ್ರಶಸ್ತಿ, ಅಸಮಾನ್ಯ ಕನ್ನಡಿಗ ಪ್ರಶಸ್ತಿಗಳು ಲಭಿಸಿವೆ ಎಂದರು.</p>.<p>ಗ್ರಂಥಾಲಯಕ್ಕೆ ಹಲವು ಗಣ್ಯ ಮಾನ್ಯರು ಭೇಟಿ ನೀಡಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ನಾಗರತ್ನಮ್ಮ ಅಧ್ಯಕ್ಷತೆಯಲ್ಲಿ ಆಗಿನ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಗೌರವಿಸಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಅಂಕೇಗೌಡ ಜ್ಞಾನ ಪ್ರತಿಷ್ಠಾನ ಪುಸ್ತಕ ಮನೆ ಗ್ರಂಥಾಲಯದ ಉಳಿವಿಗೆ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಸಹಾಯಹಸ್ತ ನೀಡಲು ಮುಂದಾಗಬೇಕು ಎಂದು ಗ್ರಂಥಾಲಯದ ವ್ಯವಸ್ಥಾಪಕ ಟ್ರಸ್ಟಿ ಎಂ.ಅಂಕೇಗೌಡ ಮನವಿ ಮಾಡಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಂಥಾಲಯದಲ್ಲಿ 20 ಲಕ್ಷಕ್ಕೂ ಅಧಿಕ ಪುಸ್ತಕಗಳಿದ್ದು, ನಿರ್ವಹಣೆ ಸಾಧ್ಯವಾಗದೇ 8 ಲಕ್ಷ ಪುಸ್ತಕಗಳು ನೆಲದ ಮೇಲೆ ಬಿದ್ದು ನೀರಿನಲ್ಲಿ ತೋಯ್ದಿವೆ, ಗೆದ್ದಲು ಸಮಸ್ಯೆಯಿಂದಾಗಿ ಹಾಳಾಗುತ್ತಿವೆ. ಆದ್ದರಿಂದ ಗ್ರಂಥಾಲಯದ ಕಟ್ಟಡ ಹಾಗೂ ಪುಸ್ತಕಗಳ ಸಮಗ್ರ ವರ್ಗೀಕರಣದ ಅವಶ್ಯಕತೆಯಾಗಿ ಆರ್ಥಿಕ ನೆರವು ನೀಡಲು ಮನವಿ ಮಾಡಿದರು.</p>.<p>ಕಳೆದ 30 ವರ್ಷಗಳಿಂದ ಪುಸ್ತಕ ಮನೆಯನ್ನು ನಿರ್ವಹಿಸುತ್ತಾ ನಡೆಸುತ್ತಿದ್ದೇನೆ. ಗ್ರಂಥಾಲಯಕ್ಕೆ ರಾಜ್ಯೋತ್ಸವ ಪ್ರಶಸ್ತಿ, ಲಿಮ್ಕಾ ಬುಕ್ ಆಫ್ ರೆಕಾರ್ಡ್, ವರ್ಲ್ಡ್ ರೆಕಾರ್ಡ್, ಆಳ್ವಾಸ್ ನುಡಿ ಸಿರಿ ಪ್ರಶಸ್ತಿ, ಅಸಮಾನ್ಯ ಕನ್ನಡಿಗ ಪ್ರಶಸ್ತಿಗಳು ಲಭಿಸಿವೆ ಎಂದರು.</p>.<p>ಗ್ರಂಥಾಲಯಕ್ಕೆ ಹಲವು ಗಣ್ಯ ಮಾನ್ಯರು ಭೇಟಿ ನೀಡಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ನಾಗರತ್ನಮ್ಮ ಅಧ್ಯಕ್ಷತೆಯಲ್ಲಿ ಆಗಿನ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಗೌರವಿಸಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>