<p><strong>ಮಳವಳ್ಳಿ:</strong> ತಳಗವಾದಿ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೇ ಸಾಲಿನಲ್ಲಿ ನಿಯಮ ಬಾಹಿರವಾಗಿ ಕಟ್ಟಡ ನಿರ್ಮಿಸಿರುವ ಬಗ್ಗೆ ತನಿಖೆ ನಡೆಸಲು ಭಾನುವಾರ ನಡೆದ ವಾರ್ಷಿಕ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಸಂಘದ ಆವರಣದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಸದಸ್ಯ ದಿಲೀಪ್ ಕುಮಾರ್ (ವಿಶ್ವ) ಹಾಗೂ ಟಿಎಪಿಸಿಎಂಎಸ್ ನಿರ್ದೇಶಕ ಟಿ.ಸಿ.ಚೌಡಯ್ಯ, ‘2018-19ನೇ ಸಾಲಿನಲ್ಲಿ ಕಾನೂನುಬಾಹಿರವಾಗಿ ನಿಯಮ ಉಲ್ಲಂಘಿಸಿ, ಇಲಾಖೆ ಅನುಮತಿ ಪಡೆಯದೇ ಕಟ್ಟಡ ನಿರ್ಮಿಸಿದ್ದು, ಆಕ್ಷೇಪಣೆಯಲ್ಲಿಟ್ಟು ಅಮಾನತು ಲೆಕ್ಕದಲ್ಲಿಡಲಾಗಿದ್ದ ₹53 ಲಕ್ಷದ ಬಗ್ಗೆ ತನಿಖೆ ನಡೆಸಿ’ ಎಂದು ಆಗ್ರಹಿಸಿದರು. ಈ ಬಗ್ಗೆ ಎಲ್ಲಾ ಸದಸ್ಯರು ಸಹಮತ ವ್ಯಕ್ತಪಡಿಸಿದರು.</p>.<p>ಅಧ್ಯಕ್ಷ ಪಿ.ಬಸವರಾಜು ಮಾತನಾಡಿ, ‘ತನಿಖೆ ನಡೆಸಲು ಅನುಮತಿ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಟಿ.ಎಚ್.ಆನಂದ್ ಮಾತನಾಡಿ, ‘ಸಂಘದ ಸದಸ್ಯತ್ವ ಬಯಸುವ ರೈತರಿಗೆ ಷೇರು ನೀಡಬೇಕು, ಸಂಘದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಸಿಇಒ ಟಿ.ಎಲ್.ನಿಂಗರಾಜು ಮಾತನಾಡಿ, ‘ವಾರ್ಷಿಕ ವರದಿಯನ್ನು ಮಂಡಿಸಿ, ಸಂಘವು ರೈತರ ಪರವಾಗಿ ಕಾರ್ಯನಿರ್ವಹಿಸಿ ಕಳೆದ ಸಾಲಿನಲ್ಲಿ ₹4.38 ಕೋಟಿ ವಾಹಿವಾಟು ನಡೆಸಿದೆ. ₹20.16 ಲಕ್ಷ ನಿವ್ವಳ ಲಾಭ ಗಳಿಸಿದೆ’ ಎಂದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಹಾಗೂ ಅತೀ ಹೆಚ್ಚು ಹಾಲು ಪೂರೈಕೆ ಮಾಡಿದ ಇಬ್ಬರು ರೈತರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.</p>.<p>ಉಪಾಧ್ಯಕ್ಷ ಟಿ.ಎಚ್.ಆಂಜನಪ್ಪ, ನಿರ್ದೇಶಕರಾದ ಹನುಮಂತು, ಜಯಮ್ಮ, ಹನುಮಂತು, ಚೌಡಯ್ಯ, ಎಂ.ಮರಿಸ್ವಾಮಿ, ಟಿ.ಎಲ್.ಚೌಡೇಗೌಡ, ರವಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ತಳಗವಾದಿ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೇ ಸಾಲಿನಲ್ಲಿ ನಿಯಮ ಬಾಹಿರವಾಗಿ ಕಟ್ಟಡ ನಿರ್ಮಿಸಿರುವ ಬಗ್ಗೆ ತನಿಖೆ ನಡೆಸಲು ಭಾನುವಾರ ನಡೆದ ವಾರ್ಷಿಕ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಸಂಘದ ಆವರಣದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಸದಸ್ಯ ದಿಲೀಪ್ ಕುಮಾರ್ (ವಿಶ್ವ) ಹಾಗೂ ಟಿಎಪಿಸಿಎಂಎಸ್ ನಿರ್ದೇಶಕ ಟಿ.ಸಿ.ಚೌಡಯ್ಯ, ‘2018-19ನೇ ಸಾಲಿನಲ್ಲಿ ಕಾನೂನುಬಾಹಿರವಾಗಿ ನಿಯಮ ಉಲ್ಲಂಘಿಸಿ, ಇಲಾಖೆ ಅನುಮತಿ ಪಡೆಯದೇ ಕಟ್ಟಡ ನಿರ್ಮಿಸಿದ್ದು, ಆಕ್ಷೇಪಣೆಯಲ್ಲಿಟ್ಟು ಅಮಾನತು ಲೆಕ್ಕದಲ್ಲಿಡಲಾಗಿದ್ದ ₹53 ಲಕ್ಷದ ಬಗ್ಗೆ ತನಿಖೆ ನಡೆಸಿ’ ಎಂದು ಆಗ್ರಹಿಸಿದರು. ಈ ಬಗ್ಗೆ ಎಲ್ಲಾ ಸದಸ್ಯರು ಸಹಮತ ವ್ಯಕ್ತಪಡಿಸಿದರು.</p>.<p>ಅಧ್ಯಕ್ಷ ಪಿ.ಬಸವರಾಜು ಮಾತನಾಡಿ, ‘ತನಿಖೆ ನಡೆಸಲು ಅನುಮತಿ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಟಿ.ಎಚ್.ಆನಂದ್ ಮಾತನಾಡಿ, ‘ಸಂಘದ ಸದಸ್ಯತ್ವ ಬಯಸುವ ರೈತರಿಗೆ ಷೇರು ನೀಡಬೇಕು, ಸಂಘದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಸಿಇಒ ಟಿ.ಎಲ್.ನಿಂಗರಾಜು ಮಾತನಾಡಿ, ‘ವಾರ್ಷಿಕ ವರದಿಯನ್ನು ಮಂಡಿಸಿ, ಸಂಘವು ರೈತರ ಪರವಾಗಿ ಕಾರ್ಯನಿರ್ವಹಿಸಿ ಕಳೆದ ಸಾಲಿನಲ್ಲಿ ₹4.38 ಕೋಟಿ ವಾಹಿವಾಟು ನಡೆಸಿದೆ. ₹20.16 ಲಕ್ಷ ನಿವ್ವಳ ಲಾಭ ಗಳಿಸಿದೆ’ ಎಂದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಹಾಗೂ ಅತೀ ಹೆಚ್ಚು ಹಾಲು ಪೂರೈಕೆ ಮಾಡಿದ ಇಬ್ಬರು ರೈತರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.</p>.<p>ಉಪಾಧ್ಯಕ್ಷ ಟಿ.ಎಚ್.ಆಂಜನಪ್ಪ, ನಿರ್ದೇಶಕರಾದ ಹನುಮಂತು, ಜಯಮ್ಮ, ಹನುಮಂತು, ಚೌಡಯ್ಯ, ಎಂ.ಮರಿಸ್ವಾಮಿ, ಟಿ.ಎಲ್.ಚೌಡೇಗೌಡ, ರವಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>