<p><strong>ಮದ್ದೂರು:</strong> ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ ದೊಡ್ಡ ಮೊತ್ತದ ಅನುದಾನ ಸಿಕ್ಕಿದೆ.</p>.<p>ಮದ್ದೂರಮ್ಮನವರ ಕೆರೆಯ ಅಚ್ಚುಕಟ್ಟು ವ್ಯಾಪ್ತಿಗೆ ಬರುವ ಬೈರನ್ ನಾಲಾ ಹಾಗೂ ವ್ಯದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲು ಗುರುವಾರ ₹49.50 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿ ರಾಜ್ಯ ಸಚಿವ ಸಂಪುಟ ಘೋಷಿಸಿದೆ.</p>.<p>10 ತಿಂಗಳ ಹಿಂದೆ ಇದೇ ಮದ್ದೂರಮ್ಮನವರ ಕೆರೆ ಅಚ್ಚುಕಟ್ಟು ವ್ಯಾಪ್ತಿಗೆ ಬರುವ 20ಕ್ಕೂ ಹೆಚ್ಚು ಹಳ್ಳಿಗಳ ರೈತ ಜಮೀನುಗಳಿಗೆ ನೀರು ಪೂರೈಕೆ ಮಾಡುವ ಕೆಮ್ಮಣ್ಣು ನಾಲಾ ಆಧುನೀಕರಣ ಕಾಮಗಾರಿಗೆ ₹90 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ನೀರಾವರಿ ಇಲಾಖೆಯ ಮೂಲಕ ನೀಡಿತ್ತು ಹಾಗೂ ಅದಕ್ಕೆ ಸಂಬಂಧಪಟ್ಟಂತೆ ಕಾಮಗಾರಿಯು ನಡೆಯುತ್ತಿದೆ.</p>.<p>‘ಮದ್ದೂರಮ್ಮನವರ ಕೆರೆ ಅಚ್ಚುಕಟ್ಟು ವ್ಯಾಪ್ತಿಗೆ ಬರುವ ಬೈರನ್ ಹಾಗೂ ವೈದ್ಯನಾಥಪುರ ನಾಲೆಗಳ ಆಧುನೀಕರಣ ಕಾಮಗಾರಿಗೂ ಅನುದಾನ ನೀಡುವಂತೆ ಈ ಮೊದಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಿಗೆ ಪ್ರಸ್ತಾವ ಸಲ್ಲಿಸಿ ಕೋರಲಾಗಿತ್ತು. ಅಂತೆಯೇ ಅದನ್ನು ಪುರಸ್ಕರಿಸಿ ಈಗ ಅನುದಾನವನ್ನು ರಾಜ್ಯ ಸರ್ಕಾರವು ನೀಡಿದೆ. ಇದರಿಂದ ನೂರಾರು ರೈತರಿಗೆ ಅನುಕೂಲವಾಗಲಿದೆ’ ಎಂದು ಶಾಸಕ ಕೆ.ಎಂ ಉದಯ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ ದೊಡ್ಡ ಮೊತ್ತದ ಅನುದಾನ ಸಿಕ್ಕಿದೆ.</p>.<p>ಮದ್ದೂರಮ್ಮನವರ ಕೆರೆಯ ಅಚ್ಚುಕಟ್ಟು ವ್ಯಾಪ್ತಿಗೆ ಬರುವ ಬೈರನ್ ನಾಲಾ ಹಾಗೂ ವ್ಯದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲು ಗುರುವಾರ ₹49.50 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿ ರಾಜ್ಯ ಸಚಿವ ಸಂಪುಟ ಘೋಷಿಸಿದೆ.</p>.<p>10 ತಿಂಗಳ ಹಿಂದೆ ಇದೇ ಮದ್ದೂರಮ್ಮನವರ ಕೆರೆ ಅಚ್ಚುಕಟ್ಟು ವ್ಯಾಪ್ತಿಗೆ ಬರುವ 20ಕ್ಕೂ ಹೆಚ್ಚು ಹಳ್ಳಿಗಳ ರೈತ ಜಮೀನುಗಳಿಗೆ ನೀರು ಪೂರೈಕೆ ಮಾಡುವ ಕೆಮ್ಮಣ್ಣು ನಾಲಾ ಆಧುನೀಕರಣ ಕಾಮಗಾರಿಗೆ ₹90 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ನೀರಾವರಿ ಇಲಾಖೆಯ ಮೂಲಕ ನೀಡಿತ್ತು ಹಾಗೂ ಅದಕ್ಕೆ ಸಂಬಂಧಪಟ್ಟಂತೆ ಕಾಮಗಾರಿಯು ನಡೆಯುತ್ತಿದೆ.</p>.<p>‘ಮದ್ದೂರಮ್ಮನವರ ಕೆರೆ ಅಚ್ಚುಕಟ್ಟು ವ್ಯಾಪ್ತಿಗೆ ಬರುವ ಬೈರನ್ ಹಾಗೂ ವೈದ್ಯನಾಥಪುರ ನಾಲೆಗಳ ಆಧುನೀಕರಣ ಕಾಮಗಾರಿಗೂ ಅನುದಾನ ನೀಡುವಂತೆ ಈ ಮೊದಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಿಗೆ ಪ್ರಸ್ತಾವ ಸಲ್ಲಿಸಿ ಕೋರಲಾಗಿತ್ತು. ಅಂತೆಯೇ ಅದನ್ನು ಪುರಸ್ಕರಿಸಿ ಈಗ ಅನುದಾನವನ್ನು ರಾಜ್ಯ ಸರ್ಕಾರವು ನೀಡಿದೆ. ಇದರಿಂದ ನೂರಾರು ರೈತರಿಗೆ ಅನುಕೂಲವಾಗಲಿದೆ’ ಎಂದು ಶಾಸಕ ಕೆ.ಎಂ ಉದಯ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>