<p><strong>ಹಲಗೂರು</strong>: ಸಮೀಪದ ಅಂತರವಳ್ಳಿಯಿಂದ ಗೊಲ್ಲರದೊಡ್ಡಿ ಮೂಲಕ ಹೊಸಪುರ ತಲುಪುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಉತ್ತಮ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡಿ ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ಡಾ.ನಾಗೇಶ್ ಮಾತನಾಡಿ, ‘ಈ ರಸ್ತೆಗೆ ಹೊಂದಿಕೊಂಡಂತೆ ಕೃಷಿ ಚಟುವಟಿಕೆಗೆ ನೂರಾರು ರೈತರು 3 ಕಿ.ಮೀ ದೂರದ ರಸ್ತೆಯನ್ನು ಬಳಸಬೇಕು. ಮಳೆ ಬಿದ್ದರೆ ರಸ್ತೆಯ ತುಂಬಾ ಗುಂಡಿಯಾಗಿ ರಾಡಿ ತುಂಬಿಕೊಳ್ಳುತ್ತದೆ. ಮಳೆಗಾಲದಲ್ಲಿ ಪಾದಚಾರಿಗಳು ನಡೆದಾಡಲೂ ಸಾಧ್ಯವಾಗುತ್ತಿಲ್ಲ. ಕೂಡಲೇ ಸಂಬಂಧಿಸಿದವರು ಸೂಕ್ತ ರಸ್ತೆ ನಿರ್ಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>‘40 ವರ್ಷಗಳಿಂದಲೂ ಜಮೀನುಗಳಿಗೆ ಇದೇ ರಸ್ತೆಯಲ್ಲಿ ಓಡಾಡುತ್ತಿದ್ದೆನೆ. ಹಲವು ಬಾರಿ ಮನವಿ ಮಾಡಿದರೂ ಇದುವರೆಗೂ ಒಂದು ರಸ್ತೆ ನಿರ್ಮಿಸುವ ಕಾರ್ಯಕ್ಕೆ ಸರ್ಕಾರ ಗಮನ ಹರಿಸುತ್ತಿಲ್ಲ’ ಎಂದು ಸೈಕಲ್ ಸವಾರ ರೈತ ಮಹದೇವಪ್ಪ ನೋವು ತೋಡಿಕೊಂಡರು.</p>.<p>ನಾಗೇಶ್, ಮಹದೇವಪ್ಪ, ಸುಂದ್ರಪ್ಪ, ರಮೇಶ್, ರಾಜೇಗೌಡ, ಆನಂದ, ನಾಗರಾಜು, ಜಯರಾಮ, ಸುನೀಲ್, ಮಹೇಶ್, ನಾಗ, ಕಾಂತರಾಜು, ಸ್ವಾಮಿ, ಶಿವ, ರಾಜೇಶ್, ಬಸವರಾಜು, ಯೋಗೇಶ್, ಮಾದಾಚಾರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ಸಮೀಪದ ಅಂತರವಳ್ಳಿಯಿಂದ ಗೊಲ್ಲರದೊಡ್ಡಿ ಮೂಲಕ ಹೊಸಪುರ ತಲುಪುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಉತ್ತಮ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡಿ ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ಡಾ.ನಾಗೇಶ್ ಮಾತನಾಡಿ, ‘ಈ ರಸ್ತೆಗೆ ಹೊಂದಿಕೊಂಡಂತೆ ಕೃಷಿ ಚಟುವಟಿಕೆಗೆ ನೂರಾರು ರೈತರು 3 ಕಿ.ಮೀ ದೂರದ ರಸ್ತೆಯನ್ನು ಬಳಸಬೇಕು. ಮಳೆ ಬಿದ್ದರೆ ರಸ್ತೆಯ ತುಂಬಾ ಗುಂಡಿಯಾಗಿ ರಾಡಿ ತುಂಬಿಕೊಳ್ಳುತ್ತದೆ. ಮಳೆಗಾಲದಲ್ಲಿ ಪಾದಚಾರಿಗಳು ನಡೆದಾಡಲೂ ಸಾಧ್ಯವಾಗುತ್ತಿಲ್ಲ. ಕೂಡಲೇ ಸಂಬಂಧಿಸಿದವರು ಸೂಕ್ತ ರಸ್ತೆ ನಿರ್ಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>‘40 ವರ್ಷಗಳಿಂದಲೂ ಜಮೀನುಗಳಿಗೆ ಇದೇ ರಸ್ತೆಯಲ್ಲಿ ಓಡಾಡುತ್ತಿದ್ದೆನೆ. ಹಲವು ಬಾರಿ ಮನವಿ ಮಾಡಿದರೂ ಇದುವರೆಗೂ ಒಂದು ರಸ್ತೆ ನಿರ್ಮಿಸುವ ಕಾರ್ಯಕ್ಕೆ ಸರ್ಕಾರ ಗಮನ ಹರಿಸುತ್ತಿಲ್ಲ’ ಎಂದು ಸೈಕಲ್ ಸವಾರ ರೈತ ಮಹದೇವಪ್ಪ ನೋವು ತೋಡಿಕೊಂಡರು.</p>.<p>ನಾಗೇಶ್, ಮಹದೇವಪ್ಪ, ಸುಂದ್ರಪ್ಪ, ರಮೇಶ್, ರಾಜೇಗೌಡ, ಆನಂದ, ನಾಗರಾಜು, ಜಯರಾಮ, ಸುನೀಲ್, ಮಹೇಶ್, ನಾಗ, ಕಾಂತರಾಜು, ಸ್ವಾಮಿ, ಶಿವ, ರಾಜೇಶ್, ಬಸವರಾಜು, ಯೋಗೇಶ್, ಮಾದಾಚಾರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>