ಗ್ರಾಮಗಳಲ್ಲಿ ನಡೆಯುವ ಮಹದೇಶ್ವರಸ್ವಾಮಿ ಜಾತ್ರೆ, ಹುಲಿವಾಹನೋತ್ಸವ ಸಂದರ್ಭದಲ್ಲಿ ಬಳಸುವ ಹುಲಿವೇಷದ ಪರಿಕರ, ಹುಲಿ ಗೊಂಬೆಗಳನ್ನು ಬಹಳ ದಿನಗಳ ಹಿಂದೆಯೇ ತೊಣ್ಣೂರು ಕೆರೆಗೆ ಬಿಡಲಾಗಿತ್ತು. ಮಳೆಯಾಗಿ ಕೆರೆಗೆ ಹೊಸ ನೀರು ಹರಿದು ಬಂದಿದ್ದರಿಂದ, ಹುಲಿ ಚರ್ಮದಂತಿರುವ ಗೊಂಬೆಯ ಮೇಲ್ಪದರವು ಮೇಲೆ ಬಂದು ತೇಲುತ್ತಿತ್ತು.