<p><strong>ಮಂಡ್ಯ:</strong> ಪ್ರಗತಿಪರ ಸಂಘಟನೆಗಳು ಫೆ.7 ರಂದು ಕರೆ ನೀಡಿದ್ದ ಮಂಡ್ಯ ಬಂದ್ ಅನ್ನು ಜಿಲ್ಲಾಡಳಿತದ ಮನವಿ ಮೇರೆಗೆ ತಾತ್ಕಾಲಿಕವಾಗಿ ಹಿಂಪಡೆದಿವೆ.</p>.<p>ಕೆರಗೋಡು ಘಟನೆ ಮುಂದಿಟ್ಟುಕೊಂಡು ಸೌಹಾರ್ದತೆಗೆ ಭಂಗ ತಂದ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲು ಈ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.</p>.<p>ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ನೇತೃತ್ವದಲ್ಲಿ ಸೋಮವಾರ ಸಭೆಯಲ್ಲಿ ಮುಖಂಡರು ಒಮ್ಮತದಿಂದ ಬಂದ್ ಕರೆ ಹಿಂಪಡೆದರು.</p>.<p>ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ಶಾಂತಿ ಕಾಪಾಡಲು ಜಿಲ್ಲಾಡಳಿತ ಬದ್ಧವಾಗಿದೆ. ಶಾಂತಿ, ಸೌಹಾರ್ದತೆ ಕಾಪಾಡಲು ಬಂದ್ ಕರೆ ಕೈಬಿಡಬೇಕು’ ಎಂದು ಕೋರಿದರು. ಅದಕ್ಕೆ ಮುಖಂಡರು ಸಮ್ಮತಿಸಿದರು.</p>.<p>‘ಜಿಲ್ಲೆಯ ಶಾಂತಿ ಕದಡಲು ಫೆ.9 ರಂದು ಬಂದ್ಗೆ ಕರೆ ನೀಡಿರುವ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು. ಸುನಂದಾ ಜಯರಾಂ ಅವರು, ‘ಫೆ.9 ರಂದೂ ಬಂದ್ಗೆ ಜಿಲ್ಲಾಡಳಿತ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಪ್ರಗತಿಪರ ಸಂಘಟನೆಗಳು ಫೆ.7 ರಂದು ಕರೆ ನೀಡಿದ್ದ ಮಂಡ್ಯ ಬಂದ್ ಅನ್ನು ಜಿಲ್ಲಾಡಳಿತದ ಮನವಿ ಮೇರೆಗೆ ತಾತ್ಕಾಲಿಕವಾಗಿ ಹಿಂಪಡೆದಿವೆ.</p>.<p>ಕೆರಗೋಡು ಘಟನೆ ಮುಂದಿಟ್ಟುಕೊಂಡು ಸೌಹಾರ್ದತೆಗೆ ಭಂಗ ತಂದ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲು ಈ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.</p>.<p>ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ನೇತೃತ್ವದಲ್ಲಿ ಸೋಮವಾರ ಸಭೆಯಲ್ಲಿ ಮುಖಂಡರು ಒಮ್ಮತದಿಂದ ಬಂದ್ ಕರೆ ಹಿಂಪಡೆದರು.</p>.<p>ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ಶಾಂತಿ ಕಾಪಾಡಲು ಜಿಲ್ಲಾಡಳಿತ ಬದ್ಧವಾಗಿದೆ. ಶಾಂತಿ, ಸೌಹಾರ್ದತೆ ಕಾಪಾಡಲು ಬಂದ್ ಕರೆ ಕೈಬಿಡಬೇಕು’ ಎಂದು ಕೋರಿದರು. ಅದಕ್ಕೆ ಮುಖಂಡರು ಸಮ್ಮತಿಸಿದರು.</p>.<p>‘ಜಿಲ್ಲೆಯ ಶಾಂತಿ ಕದಡಲು ಫೆ.9 ರಂದು ಬಂದ್ಗೆ ಕರೆ ನೀಡಿರುವ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು. ಸುನಂದಾ ಜಯರಾಂ ಅವರು, ‘ಫೆ.9 ರಂದೂ ಬಂದ್ಗೆ ಜಿಲ್ಲಾಡಳಿತ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>