<p><strong>ಮಂಡ್ಯ</strong>: ಕೆಆರ್ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ ಕೈಬಿಡುವುದು, ಕಾವೇರಿ ಆರತಿ ಬದಲು ಇದರ ಹಣವನ್ನು ಸರ್ಕಾರಿ ಶಾಲೆ ಉಳಿವಿಗೆ ಖರ್ಚು ಮಾಡಬೇಕು ಎಂದು ಒತ್ತಾಯಿಸಿ ಕನ್ನಡಸೇನೆ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕುಮಾರ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವರು, ಈಗಾಗಲೇ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆ ನಡೆಸಿದ್ದು, ಯೋಜನೆ ಕೈಬಿಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿದ್ದರು. ಆದರೆ, ಕಾಮಗಾರಿ ಮತ್ತೆ ಪ್ರಾರಂಭ ಮಾಡುವುದು ಏಕೆ’ ಎಂದು ಪ್ರಶ್ನಿಸಿದರು.</p>.<p>ವಿರೋಧದ ನಡುವೆಯೂ ಸಾರ್ವಜನಿಕರ ತೆರಿಗೆ ಹಣ ಬಳಕೆ ಮಾಡುವುದು ಎಷ್ಟರಮಟ್ಟಿಗೆ ಸರಿ? ಕೋಟಿ ಕೋಟಿ ವೆಚ್ಚ ಮಾಡುವ ಕಾವೇರಿ ಆರತಿ ಯಾವುದೇ ಕಾರಣಕ್ಕೂ ಬೇಡ, ಈ ಹಣವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ. ಮಂಜುನಾಥ್, ಮುಖಂಡರಾದ ಸೌಭಾಗ್ಯ, ಮಂಜುನಾಥ್, ಜಿ.ಮಹಾಂತಪ್ಪ, ಮಂಜುನಾಥ್, ಜಯಮ್ಮ, ಶಾಲಿನಿ, ಮಂಗಳಮ್ಮ, ವೇಣುಗೋಪಾಲ್, ಪ್ರಸನ್ನ, ರಾಘವೇಂದ್ರ, ರಘು, ಕುಮಾರ್, ಅಭಿಷೇಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕೆಆರ್ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ ಕೈಬಿಡುವುದು, ಕಾವೇರಿ ಆರತಿ ಬದಲು ಇದರ ಹಣವನ್ನು ಸರ್ಕಾರಿ ಶಾಲೆ ಉಳಿವಿಗೆ ಖರ್ಚು ಮಾಡಬೇಕು ಎಂದು ಒತ್ತಾಯಿಸಿ ಕನ್ನಡಸೇನೆ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕುಮಾರ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವರು, ಈಗಾಗಲೇ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆ ನಡೆಸಿದ್ದು, ಯೋಜನೆ ಕೈಬಿಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿದ್ದರು. ಆದರೆ, ಕಾಮಗಾರಿ ಮತ್ತೆ ಪ್ರಾರಂಭ ಮಾಡುವುದು ಏಕೆ’ ಎಂದು ಪ್ರಶ್ನಿಸಿದರು.</p>.<p>ವಿರೋಧದ ನಡುವೆಯೂ ಸಾರ್ವಜನಿಕರ ತೆರಿಗೆ ಹಣ ಬಳಕೆ ಮಾಡುವುದು ಎಷ್ಟರಮಟ್ಟಿಗೆ ಸರಿ? ಕೋಟಿ ಕೋಟಿ ವೆಚ್ಚ ಮಾಡುವ ಕಾವೇರಿ ಆರತಿ ಯಾವುದೇ ಕಾರಣಕ್ಕೂ ಬೇಡ, ಈ ಹಣವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ. ಮಂಜುನಾಥ್, ಮುಖಂಡರಾದ ಸೌಭಾಗ್ಯ, ಮಂಜುನಾಥ್, ಜಿ.ಮಹಾಂತಪ್ಪ, ಮಂಜುನಾಥ್, ಜಯಮ್ಮ, ಶಾಲಿನಿ, ಮಂಗಳಮ್ಮ, ವೇಣುಗೋಪಾಲ್, ಪ್ರಸನ್ನ, ರಾಘವೇಂದ್ರ, ರಘು, ಕುಮಾರ್, ಅಭಿಷೇಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>