<p><strong>ಮದ್ದೂರು:</strong> ಪಟ್ಟಣದ ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಿ ದರೋಡೆ ನಡೆಸಲು ಹೊಂಚು ಹಾಕಿದ್ದ ನಾಲ್ವರು ಆರೋಪಿಗಳು ಸಾರ್ವಜನಿಕರಿಗೆ ಸಿಕ್ಕಿಬಿದ್ದು, ಈಗ ಪೊಲೀಸರ ಅತಿಥಿಗಳಾಗಿದ್ದಾರೆ.</p>.<p>ಬೆಂಗಳೂರಿನ ಉತ್ತರಹಳ್ಳಿಯ ಸುರೇಶ್, ಪದ್ಮನಾಭನಗರದ ಓಂಪ್ರಕಾಶ್, ಮದ್ದೂರಿನ ಲೀಲಾವತಿ ಬಡಾವಣೆಯ ಪ್ರಜ್ವಲ್, ಸಂಜಯ್ ಬಂಧಿತರು. ಮತ್ತೊಬ್ಬ ಆರೋಪಿ ಕಾರ್ತಿಕ್ ತಲೆಮರಿಸಿಕೊಂಡಿದ್ದಾನೆ.</p>.<p>ಪಟ್ಟಣದ ಕೊಪ್ಪ ಸರ್ಕಲ್ ಬಳಿ ಫೆ.12ರಂದು ಈ ಘಟನೆ ನಡೆದಿದೆ. ಅಂದು ಈ ಐವರು ಆರೋಪಿಗಳಲ್ಲಿ ಓಂ ಪ್ರಕಾಶ್ ಎಂಬಾತನಿಗೆ ಸೇರಿದ ಹುಂಡೈ ಕ್ರೇಟಾ ಕಾರ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಲಾಗಿತ್ತು. ಆರೋಪಿಗಳು ದರೋಡೆಯ ಸಂಚು ರೂಪಿಸಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ಸಂದರ್ಭ ದಲ್ಲಿ ಡೀಸೆಲ್ ಖಾಲಿಯಾಗಿ ರಸ್ತೆಯಲ್ಲೇ ನಿಂತಿತ್ತು.</p>.<p>ಪರಿಣಾಮ ಹಿಂದಿನಿಂದ ಬಂದ ಲಾರಿ ಚಾಲಕ ದಾರಿ ಬಿಡು ವಂತೆ ಹಾರನ್ ಮಾಡಿದ್ದಾರೆ. ಈ ಸಮಯದಲ್ಲಿ ಕಾರಿನೊಳಗಿದ್ದ ಆರೋಪಿಗಳು ಪಾನಮತ್ತರಾಗಿದ್ದು, ಲಾರಿ ಚಾಲಕನೊಂದಿಗೆ ವಾಗ್ವಾದ ನಡೆಸಿದ್ದಾರೆ. ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದಾಗ ಸಾರ್ವಜನಿಕರು ಜಗಳ ಬಿಡಿಸಲು ಯತ್ನಿಸಿದ್ದಾರೆ. ಆರೋಪಿಗಳು ಜನರೊಂದಿಗೂ ವಾಗ್ವಾದ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕುಪಿತರಾದ ಜನರು ಅವರನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಕಾರ್ನಲ್ಲಿ ಡ್ರ್ಯಾಗನ್, ಒಂದು ಬಟನ್ ಚಾಕು, ಮಂಕಿ ಕ್ಯಾಪ್, ಹ್ಯಾಂಡ್ ಗ್ಲೌಸ್, ಪೆಪ್ಪರ್ ಸ್ಪ್ರೇ, ಮೊಳೆಗಳು, ಮುಖ ಮುಚ್ಚುವ ಮಾಸ್ಕ್ ಪತ್ತೆಯಾಗಿವೆ. ಈ ಐವರು ಹೆದ್ದಾರಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಮದ್ದೂರು ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಪಟ್ಟಣದ ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಿ ದರೋಡೆ ನಡೆಸಲು ಹೊಂಚು ಹಾಕಿದ್ದ ನಾಲ್ವರು ಆರೋಪಿಗಳು ಸಾರ್ವಜನಿಕರಿಗೆ ಸಿಕ್ಕಿಬಿದ್ದು, ಈಗ ಪೊಲೀಸರ ಅತಿಥಿಗಳಾಗಿದ್ದಾರೆ.</p>.<p>ಬೆಂಗಳೂರಿನ ಉತ್ತರಹಳ್ಳಿಯ ಸುರೇಶ್, ಪದ್ಮನಾಭನಗರದ ಓಂಪ್ರಕಾಶ್, ಮದ್ದೂರಿನ ಲೀಲಾವತಿ ಬಡಾವಣೆಯ ಪ್ರಜ್ವಲ್, ಸಂಜಯ್ ಬಂಧಿತರು. ಮತ್ತೊಬ್ಬ ಆರೋಪಿ ಕಾರ್ತಿಕ್ ತಲೆಮರಿಸಿಕೊಂಡಿದ್ದಾನೆ.</p>.<p>ಪಟ್ಟಣದ ಕೊಪ್ಪ ಸರ್ಕಲ್ ಬಳಿ ಫೆ.12ರಂದು ಈ ಘಟನೆ ನಡೆದಿದೆ. ಅಂದು ಈ ಐವರು ಆರೋಪಿಗಳಲ್ಲಿ ಓಂ ಪ್ರಕಾಶ್ ಎಂಬಾತನಿಗೆ ಸೇರಿದ ಹುಂಡೈ ಕ್ರೇಟಾ ಕಾರ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಲಾಗಿತ್ತು. ಆರೋಪಿಗಳು ದರೋಡೆಯ ಸಂಚು ರೂಪಿಸಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ಸಂದರ್ಭ ದಲ್ಲಿ ಡೀಸೆಲ್ ಖಾಲಿಯಾಗಿ ರಸ್ತೆಯಲ್ಲೇ ನಿಂತಿತ್ತು.</p>.<p>ಪರಿಣಾಮ ಹಿಂದಿನಿಂದ ಬಂದ ಲಾರಿ ಚಾಲಕ ದಾರಿ ಬಿಡು ವಂತೆ ಹಾರನ್ ಮಾಡಿದ್ದಾರೆ. ಈ ಸಮಯದಲ್ಲಿ ಕಾರಿನೊಳಗಿದ್ದ ಆರೋಪಿಗಳು ಪಾನಮತ್ತರಾಗಿದ್ದು, ಲಾರಿ ಚಾಲಕನೊಂದಿಗೆ ವಾಗ್ವಾದ ನಡೆಸಿದ್ದಾರೆ. ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದಾಗ ಸಾರ್ವಜನಿಕರು ಜಗಳ ಬಿಡಿಸಲು ಯತ್ನಿಸಿದ್ದಾರೆ. ಆರೋಪಿಗಳು ಜನರೊಂದಿಗೂ ವಾಗ್ವಾದ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕುಪಿತರಾದ ಜನರು ಅವರನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಕಾರ್ನಲ್ಲಿ ಡ್ರ್ಯಾಗನ್, ಒಂದು ಬಟನ್ ಚಾಕು, ಮಂಕಿ ಕ್ಯಾಪ್, ಹ್ಯಾಂಡ್ ಗ್ಲೌಸ್, ಪೆಪ್ಪರ್ ಸ್ಪ್ರೇ, ಮೊಳೆಗಳು, ಮುಖ ಮುಚ್ಚುವ ಮಾಸ್ಕ್ ಪತ್ತೆಯಾಗಿವೆ. ಈ ಐವರು ಹೆದ್ದಾರಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಮದ್ದೂರು ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>