ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ಕಲಾವಿದ ಲೋಕೇಶ್‌ ಸಾವು

Published 30 ಜುಲೈ 2023, 0:50 IST
Last Updated 30 ಜುಲೈ 2023, 0:50 IST
ಅಕ್ಷರ ಗಾತ್ರ

ಮಂಡ್ಯ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಯಲಿಯೂರು ಬಳಿ ಶನಿವಾರ ನಸುಕಿನಲ್ಲಿ ನಡೆದ ಅಪಘಾತದಲ್ಲಿ, ಚಿತ್ರಕಲಾ ಕಲಾವಿದ, ನಟ ಲೋಕೇಶ್‌ (38) ಅವರು ಸ್ಥಳದಲ್ಲೇ ಮೃತಪಟ್ಟರು.

‘ಎರಡೂ ಕಾಲು, ಎರಡು ಕೈ ತುಂಡಾದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಯಾವ ರೀತಿ ಅಪಘಾತವಾಗಿದೆ ಎಂಬುದು ಗೊತ್ತಾಗಿಲ್ಲ. ಬೆಂಗಳೂರಿನಿಂದ ಮೈಸೂರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಅವರು ನಿಂತಿದ್ದ ಕಾರ್‌ಗೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ. ಅಪಘಾತದ ಸ್ಥಳದಲ್ಲಿ ನಂಬರ್‌ ಪ್ಲೇಟ್‌ ಪತ್ತೆಯಾಗಿದ್ದು ಕಾರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ದೊಡ್ಡತುಪ್ಪೂರು ಗ್ರಾಮದ ಲೋಕೇಶ್‌ ಚಲನಚಿತ್ರಗಳ ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಹಲವು ಕಲಾ ನಿರ್ದೇಶಕರ ಬಳಿ ಕೆಲಸ ಮಾಡಿದ್ದರು. ಹಲವು ಚಿತ್ರ, ಕಿರುಚಿತ್ರಗಳಲ್ಲಿ ನಟಿಸಿದ್ದರು. ‘ಅಮೂಲ್ಯ ರತ್ನ’ ಕಿರುಚಿತ್ರ, ‘ಫ್ಯಾಮಿಲಿ ಪ್ಯಾಕ್‌’ ಚಲನಚಿತ್ರದಲ್ಲಿ ಅವರು ಅಭಿನಯಿಸಿದ್ದರು.

ಶುಕ್ರವಾರ ತಡರಾತ್ರಿ 2.30ಕ್ಕೆ ಬೆಂಗಳೂರು ಬಿಟ್ಟಿದ್ದ ಅವರು ತಮ್ಮ ಊರಿಗೆ ತೆರಳುತ್ತಿದ್ದರು. ನಸುಕಿನ 5.15ರ ಸಮಯದಲ್ಲಿ ಅಪಘಾತವಾಗಿದೆ. ಹೊಸ ಬೈಕ್‌ ಖರೀದಿಸಿದ್ದ ಅವರು ಶುಕ್ರವಾರ ಸಂಜೆ ರೀಲ್ಸ್‌ ಮಾಡಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT