ಮಧ್ಯಾಹ್ನದ ಬಿಸಿಯೂಟ ನೌಕರರಿಗೆ ಬೇಸಿಗೆ ರಜಾ ಅವಧಿಯನ್ನು ಒಳಗೊಂಡಂತೆ ಶಾಲೆ ಮುಚ್ಚಿರುವ ಸಂದರ್ಭದಲ್ಲಿ ಮಾಸಿಕ ₹10 ಸಾವಿರ ನೀಡಬೇಕು. ಅಕ್ಷರದಾಸೋಹದಲ್ಲಿ ಕೇಂದ್ರೀಕೃತ ಅಡುಗೆ ಪದ್ಧತಿ ಮತ್ತು ಗುತ್ತಿಗೆ ಪದ್ಧತಿ ಕೈ ಬಿಡಬೇಕು. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಗುತ್ತಿಗೆ ಕಾರ್ಮಿಕರು, ಆಶಾ, ಅಂಗನವಾಡಿ, ಎನ್ಎಚ್ಎಂನ ಎಲ್ಲಾ ಯೋಜನಾ ಕೆಲಸಗಾರರಿಗೂ ಅಪಾಯಕಾರಿ ಕೆಲಸದ ಭತ್ಯೆಯಾಗಿ ಪ್ರತಿ ತಿಂಗಳೂ ₹10 ಸಾವಿರ ನೀಡಬೇಕು ಎಂದು ಒತ್ತಾಯಿಸಿದರು.