ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಮ್ಮ ಮತ–ನಮ್ಮ ನಿರ್ಧಾರ’

Last Updated 2 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರಿ ಶಾಲೆಗಳ ಸಬಲೀಕರಣ ವರದಿ–2017ನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕೃತವಾಗಿ ಘೋಷಿಸುವ ಪಕ್ಷದ ಅಭ್ಯರ್ಥಿಗೆ ನಮ್ಮ ಮತ’ ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಘೋಷಿಸಿದೆ.

ಇದಕ್ಕಾಗಿ ವೇದಿಕೆ ‘ನಮ್ಮ ಮತ–ನಮ್ಮ ನಿರ್ಧಾರ’ ಎಂದು ಚುನಾವಣಾ ಆಂದೋಲನವನ್ನು ಪ್ರಾರಂಭಿಸಿದೆ.

ಎಲ್ಲಾ ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ಜನಪರ ಸಂಘಟನೆಗಳು ದಶಕಗಳಿಂದ ಚಳವಳಿಗಳನ್ನು ಮಾಡುತ್ತಿವೆ. ಆದರೆ, ಯಾವ ಸರ್ಕಾರವೂ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ವೇದಿಕೆ ದೂರಿದೆ.

‘ಸರ್ಕಾರಿ ಶಾಲೆಗಳು ಉಳಿಯಲಿ-ಬೆಳೆಯಲಿ-ನೆರೆಹೊರೆಯ ಸಮಾನ ಶಾಲೆಗಳಾಗಲಿ ಎಂಬ ಘೋಷ ವಾಕ್ಯದೊಂದಿಗೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ
ಯನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದ್ದೇವೆ. ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ.

ಶಿಕ್ಷಣ ವ್ಯವಸ್ಥೆಯ ಲೋಪಗಳ ಬಗ್ಗೆ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇವೆ’ ಎಂದು ವೇದಿಕೆಯ ವಿ.ಪಿ.ನಿರಂಜನಾರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT