<p><strong>ಪಾಂಡವಪುರ:</strong> ತಾಲ್ಲೂಕಿನ ಹರಳಹಳ್ಳಿ ಗ್ರಾಮದ ಅಂಕೇಗೌಡರ ಪುಸ್ತಕದ ಮನೆಗೆ ಸೋಮವಾರ ಭೇಟಿ ನೀಡಿದ ಶಾಸಕ ಡಾ.ಸಿ.ಎನ್. ಅಶ್ವತ್ಥ್ ನಾರಾಯಣಗೌಡ ಅವರು ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡರನ್ನು ಅಭಿನಂದಿಸಿದರು.</p>.<p>ಬಳಿಕ ಮಾತನಾಡಿದ ಅವರು, ಪುಸ್ತಕ ಪ್ರೇಮಿ ಅಂಕೇಗೌಡರು ಲಕ್ಷಾಂತರ ಪುಸ್ತಕಗಳನ್ನು ಸಂಗ್ರಹಿಸಿ ಜ್ಞಾನಕ್ಕೆ ಒತ್ತು ನೀಡಿದ್ದಾರೆ. ಸ್ಪಷ್ಟ ಗುರಿ, ಸಂದೇಶದಿಂದ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ನಳಂದ ಮತ್ತು ತಕ್ಷಶಿಲೆ ರೀತಿಯಲ್ಲಿ ಈ ಗ್ರಂಥಾಲಯ ಬೆಳಸಬೇಕು ಎಂಬುದು ಅವರ ಉದ್ದೇಶವಾಗಿದೆ. ಕೇಂದ್ರ ಸರ್ಕಾರವು ಇವರ ಸಾಧನೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ ಎಂದರು.</p>.<p>ಎಂ.ಅಂಕೇಗೌಡ ಮಾತನಾಡಿ, ಸತತ 50 ವರ್ಷಗಳ ಪರಿಶ್ರಮದಿಂದ ಪುಸ್ತಕ ಭಂಡಾರ ಮಾಡಿದ್ದೇನೆ. ಈ ಪುಸ್ತಕಾಲಯಕ್ಕೆ ಶಕ್ತಿ ತುಂಬಬೇಕಿದೆ. ಇದರ ಉಳಿವಿಗಾಗಿ ಎಲ್ಲರೂ ಸಹಕಾರ ನೀಡಬೇಕು. ನನ್ನ ಬದುಕೇ ಪುಸ್ತಕದ ಮನೆಯಾಗಿದೆ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಗಳಾ ನವೀನ್, ಮುಖಂಡರಾದ ಉಮೇಶ್, ಧನಂಜಯ, ಟಿ.ಶ್ರೀಧರ್, ಎಚ್.ಎನ್.ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ತಾಲ್ಲೂಕಿನ ಹರಳಹಳ್ಳಿ ಗ್ರಾಮದ ಅಂಕೇಗೌಡರ ಪುಸ್ತಕದ ಮನೆಗೆ ಸೋಮವಾರ ಭೇಟಿ ನೀಡಿದ ಶಾಸಕ ಡಾ.ಸಿ.ಎನ್. ಅಶ್ವತ್ಥ್ ನಾರಾಯಣಗೌಡ ಅವರು ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡರನ್ನು ಅಭಿನಂದಿಸಿದರು.</p>.<p>ಬಳಿಕ ಮಾತನಾಡಿದ ಅವರು, ಪುಸ್ತಕ ಪ್ರೇಮಿ ಅಂಕೇಗೌಡರು ಲಕ್ಷಾಂತರ ಪುಸ್ತಕಗಳನ್ನು ಸಂಗ್ರಹಿಸಿ ಜ್ಞಾನಕ್ಕೆ ಒತ್ತು ನೀಡಿದ್ದಾರೆ. ಸ್ಪಷ್ಟ ಗುರಿ, ಸಂದೇಶದಿಂದ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ನಳಂದ ಮತ್ತು ತಕ್ಷಶಿಲೆ ರೀತಿಯಲ್ಲಿ ಈ ಗ್ರಂಥಾಲಯ ಬೆಳಸಬೇಕು ಎಂಬುದು ಅವರ ಉದ್ದೇಶವಾಗಿದೆ. ಕೇಂದ್ರ ಸರ್ಕಾರವು ಇವರ ಸಾಧನೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ ಎಂದರು.</p>.<p>ಎಂ.ಅಂಕೇಗೌಡ ಮಾತನಾಡಿ, ಸತತ 50 ವರ್ಷಗಳ ಪರಿಶ್ರಮದಿಂದ ಪುಸ್ತಕ ಭಂಡಾರ ಮಾಡಿದ್ದೇನೆ. ಈ ಪುಸ್ತಕಾಲಯಕ್ಕೆ ಶಕ್ತಿ ತುಂಬಬೇಕಿದೆ. ಇದರ ಉಳಿವಿಗಾಗಿ ಎಲ್ಲರೂ ಸಹಕಾರ ನೀಡಬೇಕು. ನನ್ನ ಬದುಕೇ ಪುಸ್ತಕದ ಮನೆಯಾಗಿದೆ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಗಳಾ ನವೀನ್, ಮುಖಂಡರಾದ ಉಮೇಶ್, ಧನಂಜಯ, ಟಿ.ಶ್ರೀಧರ್, ಎಚ್.ಎನ್.ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>