<p><strong>ಮದ್ದೂರು:</strong> ತಾಲ್ಲೂಕಿನ ಕೆಸ್ತೂರು ವ್ಯಾಪ್ತಿ ಮಾಚಹಳ್ಳಿ ಗ್ರಾಮದ ಮನೆಯೊಂದಕ್ಕೆ, ಅಕ್ರಮವಾಗಿ ಪಡೆದುಕೊಂಡಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಹೋಗಿದ್ದ ಸೆಸ್ಕ್ ಸಿಬ್ಬಂದಿ ಮೇಲೆ ಮಂಗಳವಾರ ಹಲ್ಲೆ ನಡೆದಿದೆ.</p>.<p>ಆರೋಪಿಗಳಾದ, ಗ್ರಾಮದ ಜಯಬೋರಮ್ಮ ಮತ್ತು ಅವರ ಪುತ್ರ ಬಿಳಿಯ ಎಂಬುವವರ ವಿರುದ್ಧ ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>ಘಟನೆ ವಿವರ:</strong> ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿರುವ ಬಗ್ಗೆ ದೂರು ಬಂದಿದ್ದರಿಂದ ಸೆಸ್ಕ್ ಕಿರಿಯ ಎಂಜಿನಿಯರ್ ಸುಧಾಕುಮಾರಿ, ಸಿಬ್ಬಂದಿ ವಿಜಯೇಂದ್ರ, ಬರಮಲಿಂಗಪ್ಪ ಮೊದಲಾದವರು ಗ್ರಾಮಕ್ಕೆ ತೆರಳಿದ್ದಾರೆ. ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ನಿಯಮ ಬಾಹಿರ ಎಂದು ಸಿಬ್ಬಂದಿ ತಿಳಿ ಹೇಳಿದ್ದಾರೆ. ಈ ವೇಳೆ ಆಕ್ರೋಶಗೊಂಡ ಜಯಬೋರಮ್ಮ ಸಿಬ್ಬಂದಿಗೆ ಕಚ್ಚಿದ್ದಾರೆ. ಅವರ ಮಗ ಬಿಳಿಯ, ಮನೆಯಲ್ಲಿದ್ದ ಮಚ್ಚನ್ನು ತೆಗೆದುಕೊಂಡು ಹಲ್ಲೆಗೆ ಮುಂದಾಗಿದ್ದಾರೆ. ಇದರೊಂದಿಗೆ, ಹಲ್ಲೆ ತಡೆಯಲು ಹೋದ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ.</p>.<p>ಹಲ್ಲೆಗೀಡಾದ ವಿಜಯೇಂದ್ರ ಹಾಗೂ ಬರಮಲಿಂಗಪ್ಪ ಅವರಿಗೆ ಕೆಸ್ತೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.</p>.<p>ಕಾರ್ಮಿಕರ ಸಂಘದಿಂದ ಖಂಡನೆ: ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂಥ ಹಲ್ಲೆಗಳು ನಡೆಯುತ್ತಿವೆ. ನೌಕರರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಸೆಸ್ಕ್ ಕಾರ್ಮಿಕ ಸಂಘಟನೆಯ ವಿಭಾಗೀಯ ಅಧ್ಯಕ್ಷ ಲೋಕೇಶ್ ಹಾಗೂ ಕಾರ್ಯದರ್ಶಿ ಓಂಕಾರ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ತಾಲ್ಲೂಕಿನ ಕೆಸ್ತೂರು ವ್ಯಾಪ್ತಿ ಮಾಚಹಳ್ಳಿ ಗ್ರಾಮದ ಮನೆಯೊಂದಕ್ಕೆ, ಅಕ್ರಮವಾಗಿ ಪಡೆದುಕೊಂಡಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಹೋಗಿದ್ದ ಸೆಸ್ಕ್ ಸಿಬ್ಬಂದಿ ಮೇಲೆ ಮಂಗಳವಾರ ಹಲ್ಲೆ ನಡೆದಿದೆ.</p>.<p>ಆರೋಪಿಗಳಾದ, ಗ್ರಾಮದ ಜಯಬೋರಮ್ಮ ಮತ್ತು ಅವರ ಪುತ್ರ ಬಿಳಿಯ ಎಂಬುವವರ ವಿರುದ್ಧ ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>ಘಟನೆ ವಿವರ:</strong> ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿರುವ ಬಗ್ಗೆ ದೂರು ಬಂದಿದ್ದರಿಂದ ಸೆಸ್ಕ್ ಕಿರಿಯ ಎಂಜಿನಿಯರ್ ಸುಧಾಕುಮಾರಿ, ಸಿಬ್ಬಂದಿ ವಿಜಯೇಂದ್ರ, ಬರಮಲಿಂಗಪ್ಪ ಮೊದಲಾದವರು ಗ್ರಾಮಕ್ಕೆ ತೆರಳಿದ್ದಾರೆ. ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ನಿಯಮ ಬಾಹಿರ ಎಂದು ಸಿಬ್ಬಂದಿ ತಿಳಿ ಹೇಳಿದ್ದಾರೆ. ಈ ವೇಳೆ ಆಕ್ರೋಶಗೊಂಡ ಜಯಬೋರಮ್ಮ ಸಿಬ್ಬಂದಿಗೆ ಕಚ್ಚಿದ್ದಾರೆ. ಅವರ ಮಗ ಬಿಳಿಯ, ಮನೆಯಲ್ಲಿದ್ದ ಮಚ್ಚನ್ನು ತೆಗೆದುಕೊಂಡು ಹಲ್ಲೆಗೆ ಮುಂದಾಗಿದ್ದಾರೆ. ಇದರೊಂದಿಗೆ, ಹಲ್ಲೆ ತಡೆಯಲು ಹೋದ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ.</p>.<p>ಹಲ್ಲೆಗೀಡಾದ ವಿಜಯೇಂದ್ರ ಹಾಗೂ ಬರಮಲಿಂಗಪ್ಪ ಅವರಿಗೆ ಕೆಸ್ತೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.</p>.<p>ಕಾರ್ಮಿಕರ ಸಂಘದಿಂದ ಖಂಡನೆ: ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂಥ ಹಲ್ಲೆಗಳು ನಡೆಯುತ್ತಿವೆ. ನೌಕರರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಸೆಸ್ಕ್ ಕಾರ್ಮಿಕ ಸಂಘಟನೆಯ ವಿಭಾಗೀಯ ಅಧ್ಯಕ್ಷ ಲೋಕೇಶ್ ಹಾಗೂ ಕಾರ್ಯದರ್ಶಿ ಓಂಕಾರ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>