ಘಟನೆ ವಿವರ: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿರುವ ಬಗ್ಗೆ ದೂರು ಬಂದಿದ್ದರಿಂದ ಸೆಸ್ಕ್ ಕಿರಿಯ ಎಂಜಿನಿಯರ್ ಸುಧಾಕುಮಾರಿ, ಸಿಬ್ಬಂದಿ ವಿಜಯೇಂದ್ರ, ಬರಮಲಿಂಗಪ್ಪ ಮೊದಲಾದವರು ಗ್ರಾಮಕ್ಕೆ ತೆರಳಿದ್ದಾರೆ. ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ನಿಯಮ ಬಾಹಿರ ಎಂದು ಸಿಬ್ಬಂದಿ ತಿಳಿ ಹೇಳಿದ್ದಾರೆ. ಈ ವೇಳೆ ಆಕ್ರೋಶಗೊಂಡ ಜಯಬೋರಮ್ಮ ಸಿಬ್ಬಂದಿಗೆ ಕಚ್ಚಿದ್ದಾರೆ. ಅವರ ಮಗ ಬಿಳಿಯ, ಮನೆಯಲ್ಲಿದ್ದ ಮಚ್ಚನ್ನು ತೆಗೆದುಕೊಂಡು ಹಲ್ಲೆಗೆ ಮುಂದಾಗಿದ್ದಾರೆ. ಇದರೊಂದಿಗೆ, ಹಲ್ಲೆ ತಡೆಯಲು ಹೋದ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ.