‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖಂಡ ಆರ್.ಅಶೋಕ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆಸಿ ಚಿತಾಭಸ್ಮ ವಿಸರ್ಜನೆ ಮಾಡಲಾಗುವುದು. ಬೆಂಗಳೂರಿನ ಬಿಜೆಪಿ ಕಾರ್ಯಾಲಯದಿಂದ ಚಿತಾಭಸ್ಮ ಹೊರಡಲಿದ್ದು ಮಧ್ಯಾಹ್ನ 1 ಗಂಟೆಗೆ ಮದ್ದೂರಿನ ಕೊಲ್ಲಿ ಸರ್ಕಲ್ ತಲುಪಲಿದೆ. ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರುವರು. ನಗರದ ಫ್ಯಾಕ್ಟರಿ ಸರ್ಕಲ್, ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬುರಾಯನಕೊಪ್ಪಲು ಮಾರ್ಗವಾಗಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಕೊಂಡೊಯ್ಯುವರು. ಮಧ್ಯಾಹ್ನ 3.30ಕ್ಕೆ ಚಿತಾಭಸ್ಮ ವಿಸರ್ಜನೆ ಮಾಡಲಾಗುವುದು’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.