14 ದಿನ ಕ್ವಾರಂಟೈನ್ ಅವಧಿ ಪೂರೈಸಿ ಗುರುವಾರ ಮಂಜೇಗೌಡ ರುದ್ರೇಶ, ಪ್ರಿಯಾಂಕಾ, ಗೀತಾ ಮತ್ತು ನಿಖಿಲ್ ಸಂತೇಬಾಚಹಳ್ಳಿ ಸಮೀಪದ ಕೊಡಗಹಳ್ಳಿ ಗ್ರಾಮಕ್ಕೆ ಬಂದಿದ್ದರು. ಕ್ವಾರಂಟೈನ್ ಅವಧಿ ಮುಗಿದಿದ್ದರೂ ಮನೆಯಲ್ಲೇ ಪ್ರತ್ಯೇಕವಾಗಿ ಇರಬೇಕು ಎಂದು ಅರಿವು ಮೂಡಿಸುತ್ತಿದ್ದೆ. ಈ ವೇಳೆ ಮಂಜೇಗೌಡ, ನಿನ್ನದು ಅತಿಯಾಯ್ತು. ನಮ್ಮ ಮೇಲೆ ದೌರ್ಜನ್ಯ ಮಾಡಿ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದೀಯಾ ಎಂದು ನಿಂದಿಸಿದರು ಎಂದು ದೂರಿದ್ದಾರೆ.