ಕನಕಪುರ ತಾಲ್ಲೂಕಿನ ತೋಕಸಂದ್ರ ಗ್ರಾಮದ ಶೇಖರ್ (20) ಮೃತ ಯುವಕ. ಈತ ತನ್ನ ನಾಲ್ವರು ಸ್ನೇಹಿತರೊಡನೆ ಬುಯ್ಯನದೊಡ್ಡಿ ಗ್ರಾಮಕ್ಕೆ ಕಟ್ಟಡ ಕೆಲಸಕ್ಕೆ ಬಂದಿದ್ದರು. ಕೆಲಸ ಮುಗಿಸಿ ತಮ್ಮ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತವಾಗಿ ಶೇಖರ್ ತೀವ್ರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.