‘ಈ ಸರ್ಕಾರ ಇರುವ ಗ್ಯಾರಂಟಿ ಇಲ್ಲ. ಅವರ ಭ್ರಷ್ಟಾಚಾರ ಪಾಪದಿಂದಲೇ ಸರ್ಕಾರ ಹೋಗುತ್ತದೆ. ನಮ್ಮ ಮೇಲೆ ಕೇಸ್ ಹಾಕಿದರೆ ನಿಮಗೂ ಇದೇ ರೀತಿ ಆಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ನಾಗಮಂಗಲದಲ್ಲಿ ಗಲಾಟೆ ಮಾಡಿಸಿದವರು, ಬೆಂಕಿ ಇಟ್ಟವರು ನೀವೇ ತಾನೇ? ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಹಲವು ಗಲಾಟೆಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಂದ ಮೇಲೆ ಮುಸ್ಲಿಂ ಕೋಮುವಾದಿಗಳು ಎದ್ದು ಕುಳಿತಿದ್ದಾರೆ. ಮುಸ್ಲಿಮರ ಪರವಾಗಿ ಕಾಂಗ್ರೆಸ್ ನಾಯಕರು ನಿಲ್ಲುತ್ತಿದ್ದಾರೆ’ ಎಂದು ಆರೋಪಿಸಿದರು.