‘ಬಸವಣ್ಣ, ಅಂಬೇಡ್ಕರ್ ಅವರ ಸಿದ್ಧಾಂತ, ಸಂವಿಧಾನದ ತತ್ವಗಳನ್ನು ಬಿಜೆಪಿ ಒಪ್ಪುವುದಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಹಾಕಲು ಆದೇಶಿಸಿದ್ದು, ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂಬುದನ್ನು ಲಿಂಗಾಯತ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಬಸವಣ್ಣನವರ ಕಾಯಕ, ದಾಸೋಹ ತತ್ವಗಳನ್ನು ಒಪ್ಪುವುದಿಲ್ಲ’ ಎಂದರು.