ಗ್ರಾಮಸ್ಥರು ಮಾತನಾಡಿ, ಕಾವೇರಿ ಜಲಾನಯನ ಯೋಜನೆಯಲ್ಲಿ ಗ್ರಾಮದ ಬಿ.ಎಂ.ರಸ್ತೆಯಿಂದ ರಾಯಕಾಲುವೆ ಅಚ್ಚುಕಟ್ಟು ಪ್ರದೇಶ, ಚೈತನ್ಯ ಕಾನ್ವೆಂಟ್ ವರೆಗೆ ₹ 41.8ಲಕ್ಷ ವೆಚ್ಚದಲ್ಲಿ ಡಾಂಬರ್ ರಸ್ತೆಯಾಗಿದೆ. ರಸ್ತೆಗೆ ನೆಪಕ್ಕೆ ಒಂದಿಷ್ಟು ಜಲ್ಲಿ ಚೆಲ್ಲಿ ಡಾಂಬರು ಹರಡಿ ಗುತ್ತಿಗೆದಾರ ಕೈಚೆಲ್ಲಿದ್ದಾರೆ. ಡಾಂಬರು ರಸ್ತೆಯನ್ನು ಉಜ್ಜಿದರೆ ಡಾಂಬರು ಪುಡಿ, ಮಣ್ಣು ಬರುತ್ತಿದೆ. ಸಣ್ಣ ವಾಹನ ಓಡಾಡಿದರೂ ರಸ್ತೆ ಗುಂಡಿ ಬೀಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.