ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ರಾಜ್ ಕುಮಾರ್ ಅವರಿಗೆ ಭಾರತರತ್ನ ನೀಡಲು ಆಗ್ರಹ

Published 24 ಏಪ್ರಿಲ್ 2023, 13:15 IST
Last Updated 24 ಏಪ್ರಿಲ್ 2023, 13:15 IST
ಅಕ್ಷರ ಗಾತ್ರ

ಮಳವಳ್ಳಿ: ಡಾ.ರಾಜ್ ಕುಮಾರ್ ಅವರ ಕನ್ನಡ ಚಿತ್ರರಂಗದ ಸಾಧನೆಗಾಗಿ ಕೇಂದ್ರ ಸರ್ಕಾರ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಬೇಕು ಎಂದು ಡಾ.ರಾಜ್ ಕುಮಾರ್ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ಒತ್ತಾಯಿಸಿದರು.

ಪಟ್ಟಣದ ಗಂಗಾಮತ ಬೀದಿಯ ಡಾ.ರಾಜ್ ಕುಮಾರ್ ಕಲಾ ಸಂಘದ ಕಚೇರಿಯಲ್ಲಿ ನಡೆದ ರಾಜ್ ಕುಮಾರ್ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.

ರಾಜ್ ಕುಮಾರ್ ಅವರ ನಟನೆಯ ಸ್ಫೂರ್ತಿಯಿಂದ ಸಾವಿರಾರು ಮಂದಿ ಕೃಷಿ ಸೇರಿದಂತೆ ಸ್ವ-ಉದ್ಯೋಗವನ್ನು ರೂಡಿಸಿಕೊಂಡು ಹೊಸ ಬದುಕು ಕಟ್ಟಿಕೊಂಡಿದ್ದಾರೆ. ಅವರಿಗೆ ದೇಶ, ವಿದೇಶಗಳಲ್ಲೂ ಅಭಿಮಾನಿಗಳು ಇದ್ದಾರೆ ಎಂದರು.

ರಾ.ಶಿ.ರಾ.ಪು ಮಂಜುನಾಥ್, ಮುಖಂಡರಾದ ಶಿವಕುಮಾರ್, ಶಿವಣ್ಣ, ಲಿಂಗರಾಜು, ಶರೀಫ್, ಕೀರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT