<p><strong>ಶ್ರೀರಂಗಪಟ್ಟಣ</strong>: ಪ್ರವಾಸಕ್ಕೆ ಬಂದವರು ನೀರಿನಲ್ಲಿ ಮುಳುಗಿ ಮೃತಪಟ್ಟ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತಾಲ್ಲೂಕಿನ ಬಲಮುರಿ ಮತ್ತು ಎಡಮುರಿ ತಾಣಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ತಹಶೀಲ್ದಾರ್ ಚೇತನಾ ಯಾದವ್ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.</p><p>ಈ ತಾಣಗಳಲ್ಲಿ ಏ.16ರ ಬೆ.6ರಿಂದಲೇ ನಿಷೇಧಾಜ್ಞೆ ಅನ್ವಯವಾಗಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p><p>ಕೆಆರ್ಎಸ್ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ವರದಿ ಆಧರಿಸಿ, ಬಿ.ಎನ್.ಎಸ್.ಎಸ್ ಕಲಂ 163ರ ಅನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.</p><p>‘ಈ ಎರಡು ತಾಣಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಾವಿನ ಪ್ರಕರಣಗಳು ಹೆಚ್ಚಾಗಿದ್ದು, ಇಲ್ಲಿಗೆ ಬರುವವರು ಮದ್ಯಪಾನ ಮಾಡಿ ನೀರಿಗೆ ಇಳಿದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೋಜು, ಮಸ್ತಿ ಮಾಡಲು ಬರುವ ಪ್ರವಾಸಿಗರೇ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 2015ರಿಂದ ಇದುವರೆಗೆ ಈ ಎರಡೂ ತಾಣಗಳಲ್ಲಿ 79 ಮಂದಿ ಮೃತಪಟ್ಟಿದ್ದಾರೆ. ಹಾಗಾಗಿ ನಿಷೇಧಾಜ್ಞೆ ಜಾರಿ ಮಾಡಬೇಕು’ ಎಂದು ಕೆಆರ್ಎಸ್ ಠಾಣೆ ಪೊಲೀಸರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದರು.</p><p>‘ಬಲಮುರಿ ಮತ್ತು ಎಡಮುರಿ ಪ್ರಕೃತಿ ತಾಣಗಳಿಗೆ ಖುಷಿಗಾಗಿ ಬರುವ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ತಾಣಗಳ ಒಡ್ಡುಗಳ ಮೇಲೆ ನಡೆದಾಡುವುದು ಮತ್ತು ನೀರಿಗೆ ಇಳಿಯುವುದನ್ನು ಸಂಪೂರ್ಣ ನಿಷೇಧಿಸಬೇಕು. ಸಮೀಪದ ಕಾರೇಕುರ ಬಳಿ ಕಾವೇರಿ ನದಿ ತೀರದಲ್ಲಿ ಕೂಡ ಅವಘಡಗಳು ಸಂಭವಿಸುತ್ತಿದ್ದು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಬೇಕು’ ಎಂದು ರೈತ ಮುಖಂಡ ಬೆಳಗೊಳ ವಿಷಕಂಠು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಪ್ರವಾಸಕ್ಕೆ ಬಂದವರು ನೀರಿನಲ್ಲಿ ಮುಳುಗಿ ಮೃತಪಟ್ಟ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತಾಲ್ಲೂಕಿನ ಬಲಮುರಿ ಮತ್ತು ಎಡಮುರಿ ತಾಣಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ತಹಶೀಲ್ದಾರ್ ಚೇತನಾ ಯಾದವ್ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.</p><p>ಈ ತಾಣಗಳಲ್ಲಿ ಏ.16ರ ಬೆ.6ರಿಂದಲೇ ನಿಷೇಧಾಜ್ಞೆ ಅನ್ವಯವಾಗಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p><p>ಕೆಆರ್ಎಸ್ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ವರದಿ ಆಧರಿಸಿ, ಬಿ.ಎನ್.ಎಸ್.ಎಸ್ ಕಲಂ 163ರ ಅನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.</p><p>‘ಈ ಎರಡು ತಾಣಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಾವಿನ ಪ್ರಕರಣಗಳು ಹೆಚ್ಚಾಗಿದ್ದು, ಇಲ್ಲಿಗೆ ಬರುವವರು ಮದ್ಯಪಾನ ಮಾಡಿ ನೀರಿಗೆ ಇಳಿದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೋಜು, ಮಸ್ತಿ ಮಾಡಲು ಬರುವ ಪ್ರವಾಸಿಗರೇ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 2015ರಿಂದ ಇದುವರೆಗೆ ಈ ಎರಡೂ ತಾಣಗಳಲ್ಲಿ 79 ಮಂದಿ ಮೃತಪಟ್ಟಿದ್ದಾರೆ. ಹಾಗಾಗಿ ನಿಷೇಧಾಜ್ಞೆ ಜಾರಿ ಮಾಡಬೇಕು’ ಎಂದು ಕೆಆರ್ಎಸ್ ಠಾಣೆ ಪೊಲೀಸರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದರು.</p><p>‘ಬಲಮುರಿ ಮತ್ತು ಎಡಮುರಿ ಪ್ರಕೃತಿ ತಾಣಗಳಿಗೆ ಖುಷಿಗಾಗಿ ಬರುವ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ತಾಣಗಳ ಒಡ್ಡುಗಳ ಮೇಲೆ ನಡೆದಾಡುವುದು ಮತ್ತು ನೀರಿಗೆ ಇಳಿಯುವುದನ್ನು ಸಂಪೂರ್ಣ ನಿಷೇಧಿಸಬೇಕು. ಸಮೀಪದ ಕಾರೇಕುರ ಬಳಿ ಕಾವೇರಿ ನದಿ ತೀರದಲ್ಲಿ ಕೂಡ ಅವಘಡಗಳು ಸಂಭವಿಸುತ್ತಿದ್ದು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಬೇಕು’ ಎಂದು ರೈತ ಮುಖಂಡ ಬೆಳಗೊಳ ವಿಷಕಂಠು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>