‘ಕಾಂಗ್ರೆಸ್ ಪಕ್ಷದ ಪ್ರಚಾರದ ಉದ್ದೇಶದಿಂದ ಹಾಕಿದ್ದ ಹೀಲಿಯಂ ಬಲೂನ್ ಸ್ಫೋಟಗೊಂಡ ವೇಳೆ ಗಾಯಗೊಂಡ ಮಕ್ಕಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಆ ಪಕ್ಷದ ಮುಖಂಡರು ಭರವಸೆ ನೀಡಿದ್ದರು. ಈಗ ನಿರ್ಲಕ್ಷ್ಯ ಮಾಡಿದ್ದಾರೆ. ಬಡ ಮಕ್ಕಳ ಯೋಗಕ್ಷೇಮ ವಿಚಾರಿಸದೇ ನಿರ್ಲಕ್ಷಿಸಿದ್ದಾರೆ. ಬಡ ಕುಟುಂಬಗಳನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.