ತಾಲ್ಲೂಕಿನ ತಳಗವಾದಿ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಾದಹಳ್ಳಿ, ಕೊರೇಗಾಲ, ಹುಲ್ಲೇಗಾಲ, ನೆಲಮಾಕನಹಳ್ಳಿ, ಟಿ.ಕಾಗೇಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಜನ ಖಾತೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ವಾರದಲ್ಲಿ ಐದು ದಿನ ಸಂಪೂರ್ಣ ಲಾಕ್ಡೌನ್ ಇದ್ದು, ಈ ಅವಧಿಯಲ್ಲಿ ಬ್ಯಾಂಕ್ ತೆರೆಯುವುದಿಲ್ಲ. ಎರಡು ದಿನಗಳಲ್ಲಿ ಬೆಳಿಗ್ಗೆ 9ರಿಂದ 11ರವರೆಗೆ ಮಾತ್ರ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದ್ದು, ಈ ಸಂದರ್ಭದಲ್ಲಿ ಹಾಲು ಉತ್ಪಾದಕರು, ನರೇಗಾ ಕಾರ್ಮಿಕರು, ವೃದ್ಧಾಪ್ಯ ವೇತನ, ಅಂಗವಿಕರ ವೇತನ ಸೇರಿದಂತೆ ವಿವಿಧ ಹಣ ಪಡೆಯಲು ನೂರಾರು ಮಂದಿ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು.