<p><strong>ಮಂಡ್ಯ</strong>: ಜಿಲ್ಲೆಯ ನಾಲೆಗಳ ಬಳಿ ಸಂಭವಿಸುತ್ತಿರುವ ಜಲ ದುರಂತಗಳಿಂದ ಉಂಟಾಗುವ ಸಾವು–ನೋವುಗಳನ್ನು ತಡೆಗಟ್ಟಲು ಮಂಡ್ಯ ಜಿಲ್ಲಾಡಳಿತ ತಡೆಗೋಡೆ ನಿರ್ಮಾಣ, ವೈಜ್ಞಾನಿಕ ರಸ್ತೆ ಉಬ್ಬು, ಸೂಚನಾ ಫಲಕ ಅಳವಡಿಸಲು ಕ್ರಮ ಕೈಗೊಂಡಿದೆ. </p>.<p>ವಿಶ್ವೇಶ್ವರಯ್ಯ ನಾಲೆಯ (ವಿ.ಸಿ) ಸುತ್ತಲಿನ ರಸ್ತೆಗಳಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, 33 ಕಿ.ಮೀ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ರಸ್ತೆ ತಡೆಗೋಡೆ ನಿರ್ಮಿಸಲಾಗಿದೆ.</p>.<p>ಜಿಲ್ಲೆಯಲ್ಲಿ ಅಂದಾಜು 540 ಕಿ.ಮೀ ನಾಲೆ ವ್ಯಾಪ್ತಿಯಿದ್ದು, ಸಂಪೂರ್ಣವಾಗಿ ತಡೆಗೋಡೆ ನಿರ್ಮಿಸುವುದು ಕಷ್ಟಕರ. ಅಪಘಾತ ವಲಯಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆಯಿಂದ 20 ಕಿ.ಮೀ ಹಾಗೂ ನೀರಾವರಿ ಇಲಾಖೆಗಳಿಂದ 13 ಕಿ.ಮೀ.ನಷ್ಟು ತಡೆಗೋಡೆ (ಕ್ರ್ಯಾಶ್ ಬ್ಯಾರಿಯರ್) ನಿರ್ಮಾಣ ಮಾಡಲಾಗಿದೆ. </p>.<p>ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಗೆ ಹೆಚ್ಚಿನ ಭಾಗದ ರಸ್ತೆ ಬರಲಿದ್ದು, ಇಲಾಖೆಗೆ ನೀಡಲಾಗುವ ಅನುದಾನದಲ್ಲಿ ಅಪಘಾತ ತಡೆಗಟ್ಟಲು ಅನುದಾನ ಮೀಸಲಿಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಕುಮಾರ ಸೂಚಿಸಿದ್ದಾರೆ. </p>.<p><strong>ತಾಂತ್ರಿಕ ಸಮಿತಿ ರಚನೆ</strong></p>.<p>ನಾಲೆ ಬಳಿ ಉಂಟಾಗುತ್ತಿರುವ ಜಲ ಅವಘಡಗಳನ್ನು ತಪ್ಪಿಸುವ ಕುರಿತು ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ನೀರಾವರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿಗೆ ಸೇರಿದ ಅಧಿಕಾರಗಳನ್ನು ಒಳಗೊಂಡ ತಾಂತ್ರಿಕ ಸಮಿತಿಯನ್ನು ಜಿಲ್ಲಾಧಿಕಾರಿ ರಚಿಸಿದ್ದರು. ಈ ಸಮಿತಿಯವರು ಅಪಘಾತ ಸಂಭವಿಸಬಹುದಾದ ವಲಯಗಳನ್ನು ಗುರುತಿಸಿ, ಆ ಸ್ಥಳಗಳಲ್ಲಿ ತಡೆಗೋಡೆ ನಿರ್ಮಿಸುವುದು ಅಗತ್ಯವಿದೆ ಎಂದು ವರದಿ ನೀಡಿದ್ದರು. </p>.<p><strong>₹141 ಕೋಟಿಗೆ ಬೇಡಿಕೆ</strong></p>.<p>ಜಿಲ್ಲೆಯ ವಿಶ್ವೇಶ್ವರಯ್ಯ ನಾಲಾ ವ್ಯಾಪ್ತಿಯ ರಸ್ತೆಗಳಲ್ಲಿ ಕೆಲವು ವಲಯಗಳಲ್ಲಿ ತಡೆಗೋಡೆಗಳು ಇಲ್ಲದೇ ಇರುವುದರಿಂದ ವಾಹನಗಳು ಚಾಲಕರ ನಿಯಂತ್ರಣ ತಪ್ಪಿ, ನಾಲೆಗೆ ಬಿದ್ದು ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ತಡೆಗೋಡೆ ನಿರ್ಮಿಸಲು ಅಗತ್ಯವಿರುವ ₹141 ಕೋಟಿ ಬಿಡುಗಡೆಗೆ ಸರ್ಕಾರಕ್ಕೆ ಜಿಲ್ಲಾಡಳಿತ 2024ರ ಜುಲೈನಲ್ಲಿ ಪ್ರಸ್ತಾವ ಸಲ್ಲಿಸಿತ್ತು. ಇದುವರೆಗೆ ಅನುದಾನ ಬಿಡುಗಡೆಯಾಗಿಲ್ಲ.</p>.<p><strong>ಸಚಿವರ ಸೂಚನೆ</strong></p>.<p>ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2024ರಲ್ಲಿ ನಡೆದ ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಸಚಿವರು ನೀಡಿದ ನಿರ್ದೇಶನದಂತೆ ತುರ್ತಾಗಿ ಅಗತ್ಯವಿರುವ ಕಡೆ ನಾಲೆ/ ಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲು ಸಂಬಂಧಪಟ್ಟ ಇಲಾಖೆಗಳಿಂದ ₹20 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಸಚಿವರು ಸೂಚಿಸಿದ್ದರು. </p>.<p>‘50 ಕಿ.ಮೀ. ವ್ಯಾಪ್ತಿಯಲ್ಲಿ 89 ತುರ್ತು ಕಾಮಗಾರಿಗಳನ್ನು ನಡೆಸಲು ಗುರಿ ಹಾಕಿಕೊಳ್ಳಲಾಗಿದೆ. ಈಗಾಗಲೇ 33 ಕಿ.ಮೀ. ವ್ಯಾಪ್ತಿಯಲ್ಲಿ ತಡೆಗೋಡೆ ನಿರ್ಮಾಣವಾಗಿದ್ದು, ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮವಹಿಸಿದ್ದೇವೆ’ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಹರ್ಷ ತಿಳಿಸಿದರು. </p>.<p>ಜಲ ದುರಂತಗಳ ಸರಮಾಲೆ</p><p>2018 ನ.24: ಪಾಂಡವಪುರ ತಾಲ್ಲೂಕು ಕನಗನಮರಡಿ ಸಮೀಪ ವಿಶ್ವೇಶ್ವರಯ್ಯ ನಾಲೆಗೆ ಖಾಸಗಿ ಬಸ್ ಬಿದ್ದು ವಿದ್ಯಾರ್ಥಿಗಳು ಸೇರಿ 34 ಮಂದಿ ದುರ್ಮರಣ 2023 ಜುಲೈ 29: ಮಗಳ ಮದುವೆಯ ಆಹ್ವಾನ ಪತ್ರಿಕೆ ಹಂಚಲು ತೆರಳುತ್ತಿದ್ದ ವೇಳೆ ಶ್ರೀರಂಗಪಟ್ಟಣ ತಾಲ್ಲೂಕು ಗಾಮನಹಳ್ಳಿ ಸಮೀಪ ಸಂಪರ್ಕ ನಾಲೆಗೆ ಕಾರು ಉರುಳಿ ಬಿದ್ದು 4 ಮಂದಿ ಸಾವು 2023 ಜುಲೈ 27: ಮಂಡ್ಯ ತಾಲ್ಲೂಕು ದುದ್ದ ಹೋಬಳಿ ಜಯಪುರ ಗ್ರಾಮದ ಬಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಪಲ್ಟಿ ಹೊಡೆದು ಚಾಲಕ ಸಾವು 2023 ನ.7: ಪಾಂಡವಪುರ ತಾಲ್ಲೂಕು ಬನಘಟ್ಟ ಬಳಿ ವಿಶ್ವೇಶ್ವರಯ್ಯ ನಾಲೆಗೆ ರಾತ್ರಿ ವೇಳೆ ಕಾರು ಬಿದ್ದು ಒಂದೇ ಕುಟುಂಬದ ಐವರು ಜಲಸಮಾಧಿ 2025 ಫೆ.3: ಮಂಡ್ಯ ತಾಲ್ಲೂಕು ಮಾಚಹಳ್ಳಿ– ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಬಿದ್ದು ಮೂವರು ನೀರುಪಾಲು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಜಿಲ್ಲೆಯ ನಾಲೆಗಳ ಬಳಿ ಸಂಭವಿಸುತ್ತಿರುವ ಜಲ ದುರಂತಗಳಿಂದ ಉಂಟಾಗುವ ಸಾವು–ನೋವುಗಳನ್ನು ತಡೆಗಟ್ಟಲು ಮಂಡ್ಯ ಜಿಲ್ಲಾಡಳಿತ ತಡೆಗೋಡೆ ನಿರ್ಮಾಣ, ವೈಜ್ಞಾನಿಕ ರಸ್ತೆ ಉಬ್ಬು, ಸೂಚನಾ ಫಲಕ ಅಳವಡಿಸಲು ಕ್ರಮ ಕೈಗೊಂಡಿದೆ. </p>.<p>ವಿಶ್ವೇಶ್ವರಯ್ಯ ನಾಲೆಯ (ವಿ.ಸಿ) ಸುತ್ತಲಿನ ರಸ್ತೆಗಳಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, 33 ಕಿ.ಮೀ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ರಸ್ತೆ ತಡೆಗೋಡೆ ನಿರ್ಮಿಸಲಾಗಿದೆ.</p>.<p>ಜಿಲ್ಲೆಯಲ್ಲಿ ಅಂದಾಜು 540 ಕಿ.ಮೀ ನಾಲೆ ವ್ಯಾಪ್ತಿಯಿದ್ದು, ಸಂಪೂರ್ಣವಾಗಿ ತಡೆಗೋಡೆ ನಿರ್ಮಿಸುವುದು ಕಷ್ಟಕರ. ಅಪಘಾತ ವಲಯಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆಯಿಂದ 20 ಕಿ.ಮೀ ಹಾಗೂ ನೀರಾವರಿ ಇಲಾಖೆಗಳಿಂದ 13 ಕಿ.ಮೀ.ನಷ್ಟು ತಡೆಗೋಡೆ (ಕ್ರ್ಯಾಶ್ ಬ್ಯಾರಿಯರ್) ನಿರ್ಮಾಣ ಮಾಡಲಾಗಿದೆ. </p>.<p>ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಗೆ ಹೆಚ್ಚಿನ ಭಾಗದ ರಸ್ತೆ ಬರಲಿದ್ದು, ಇಲಾಖೆಗೆ ನೀಡಲಾಗುವ ಅನುದಾನದಲ್ಲಿ ಅಪಘಾತ ತಡೆಗಟ್ಟಲು ಅನುದಾನ ಮೀಸಲಿಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಕುಮಾರ ಸೂಚಿಸಿದ್ದಾರೆ. </p>.<p><strong>ತಾಂತ್ರಿಕ ಸಮಿತಿ ರಚನೆ</strong></p>.<p>ನಾಲೆ ಬಳಿ ಉಂಟಾಗುತ್ತಿರುವ ಜಲ ಅವಘಡಗಳನ್ನು ತಪ್ಪಿಸುವ ಕುರಿತು ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ನೀರಾವರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿಗೆ ಸೇರಿದ ಅಧಿಕಾರಗಳನ್ನು ಒಳಗೊಂಡ ತಾಂತ್ರಿಕ ಸಮಿತಿಯನ್ನು ಜಿಲ್ಲಾಧಿಕಾರಿ ರಚಿಸಿದ್ದರು. ಈ ಸಮಿತಿಯವರು ಅಪಘಾತ ಸಂಭವಿಸಬಹುದಾದ ವಲಯಗಳನ್ನು ಗುರುತಿಸಿ, ಆ ಸ್ಥಳಗಳಲ್ಲಿ ತಡೆಗೋಡೆ ನಿರ್ಮಿಸುವುದು ಅಗತ್ಯವಿದೆ ಎಂದು ವರದಿ ನೀಡಿದ್ದರು. </p>.<p><strong>₹141 ಕೋಟಿಗೆ ಬೇಡಿಕೆ</strong></p>.<p>ಜಿಲ್ಲೆಯ ವಿಶ್ವೇಶ್ವರಯ್ಯ ನಾಲಾ ವ್ಯಾಪ್ತಿಯ ರಸ್ತೆಗಳಲ್ಲಿ ಕೆಲವು ವಲಯಗಳಲ್ಲಿ ತಡೆಗೋಡೆಗಳು ಇಲ್ಲದೇ ಇರುವುದರಿಂದ ವಾಹನಗಳು ಚಾಲಕರ ನಿಯಂತ್ರಣ ತಪ್ಪಿ, ನಾಲೆಗೆ ಬಿದ್ದು ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ತಡೆಗೋಡೆ ನಿರ್ಮಿಸಲು ಅಗತ್ಯವಿರುವ ₹141 ಕೋಟಿ ಬಿಡುಗಡೆಗೆ ಸರ್ಕಾರಕ್ಕೆ ಜಿಲ್ಲಾಡಳಿತ 2024ರ ಜುಲೈನಲ್ಲಿ ಪ್ರಸ್ತಾವ ಸಲ್ಲಿಸಿತ್ತು. ಇದುವರೆಗೆ ಅನುದಾನ ಬಿಡುಗಡೆಯಾಗಿಲ್ಲ.</p>.<p><strong>ಸಚಿವರ ಸೂಚನೆ</strong></p>.<p>ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2024ರಲ್ಲಿ ನಡೆದ ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಸಚಿವರು ನೀಡಿದ ನಿರ್ದೇಶನದಂತೆ ತುರ್ತಾಗಿ ಅಗತ್ಯವಿರುವ ಕಡೆ ನಾಲೆ/ ಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲು ಸಂಬಂಧಪಟ್ಟ ಇಲಾಖೆಗಳಿಂದ ₹20 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಸಚಿವರು ಸೂಚಿಸಿದ್ದರು. </p>.<p>‘50 ಕಿ.ಮೀ. ವ್ಯಾಪ್ತಿಯಲ್ಲಿ 89 ತುರ್ತು ಕಾಮಗಾರಿಗಳನ್ನು ನಡೆಸಲು ಗುರಿ ಹಾಕಿಕೊಳ್ಳಲಾಗಿದೆ. ಈಗಾಗಲೇ 33 ಕಿ.ಮೀ. ವ್ಯಾಪ್ತಿಯಲ್ಲಿ ತಡೆಗೋಡೆ ನಿರ್ಮಾಣವಾಗಿದ್ದು, ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮವಹಿಸಿದ್ದೇವೆ’ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಹರ್ಷ ತಿಳಿಸಿದರು. </p>.<p>ಜಲ ದುರಂತಗಳ ಸರಮಾಲೆ</p><p>2018 ನ.24: ಪಾಂಡವಪುರ ತಾಲ್ಲೂಕು ಕನಗನಮರಡಿ ಸಮೀಪ ವಿಶ್ವೇಶ್ವರಯ್ಯ ನಾಲೆಗೆ ಖಾಸಗಿ ಬಸ್ ಬಿದ್ದು ವಿದ್ಯಾರ್ಥಿಗಳು ಸೇರಿ 34 ಮಂದಿ ದುರ್ಮರಣ 2023 ಜುಲೈ 29: ಮಗಳ ಮದುವೆಯ ಆಹ್ವಾನ ಪತ್ರಿಕೆ ಹಂಚಲು ತೆರಳುತ್ತಿದ್ದ ವೇಳೆ ಶ್ರೀರಂಗಪಟ್ಟಣ ತಾಲ್ಲೂಕು ಗಾಮನಹಳ್ಳಿ ಸಮೀಪ ಸಂಪರ್ಕ ನಾಲೆಗೆ ಕಾರು ಉರುಳಿ ಬಿದ್ದು 4 ಮಂದಿ ಸಾವು 2023 ಜುಲೈ 27: ಮಂಡ್ಯ ತಾಲ್ಲೂಕು ದುದ್ದ ಹೋಬಳಿ ಜಯಪುರ ಗ್ರಾಮದ ಬಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಪಲ್ಟಿ ಹೊಡೆದು ಚಾಲಕ ಸಾವು 2023 ನ.7: ಪಾಂಡವಪುರ ತಾಲ್ಲೂಕು ಬನಘಟ್ಟ ಬಳಿ ವಿಶ್ವೇಶ್ವರಯ್ಯ ನಾಲೆಗೆ ರಾತ್ರಿ ವೇಳೆ ಕಾರು ಬಿದ್ದು ಒಂದೇ ಕುಟುಂಬದ ಐವರು ಜಲಸಮಾಧಿ 2025 ಫೆ.3: ಮಂಡ್ಯ ತಾಲ್ಲೂಕು ಮಾಚಹಳ್ಳಿ– ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಬಿದ್ದು ಮೂವರು ನೀರುಪಾಲು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>