<p><strong>ಪಾಂಡವಪುರ</strong>: ‘ಬಸವಣ್ಣನವರ ಅನುಭವ ಮಂಟಪದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿಚಾರಗಳನ್ನು ಚರ್ಚಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಬಸವಣ್ಣ ಅವರ 892ನೇ ಜಯಂತ್ಯುತ್ಸವದ ಸಾನಿಧ್ಯವಹಿಸಿ ಅವರು ಮಾತನಾಡಿದರು.</p>.<p>‘ಅಸ್ಪ್ಯಶ್ಯತೆ ಹೋಗಲಾಡಿಸಿ ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರು ಶ್ರಮಿಸಿದರು. ಬಸವಣ್ಣನವರ ಆದರ್ಶ, ಹೋರಾಟ ಮತ್ತು ಸಾಮಾಜಿಕ ಕಳಕಳಿಯನ್ನು ನಾವು ಈ ಕಾಲಘಟ್ಟದಲ್ಲಿಯೂ ಸ್ಮರಿಸುತ್ತಿದ್ದೇವೆ ಎಂದರೆ ಅವರ ದಿವ್ಯ ಶಕ್ತಿ ಎಷ್ಟಿರಬಹುದು ಎಂಬುದನ್ನು ನಾವು ಅರಿಯಬೇಕಿದೆ ಎಂದು ಹೇಳಿದರು.</p>.<p>ಬಸವಣ್ಣನವರು ಕನ್ನಡ ಭಾಷೆಯ ಮೂಲಕವೇ ಜನರಿಗೆ ಅರಿವು ಮೂಡಿಸಿ ಜನರಲ್ಲಿ ಸಾಮಾಜಿಕ ಅರಿವು ಮೂಡಿಸಿದರು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ‘ಬಸವಣ್ಣನವರ ಅನುಭವ ಮಂಟಪದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿಚಾರಗಳನ್ನು ಚರ್ಚಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಬಸವಣ್ಣ ಅವರ 892ನೇ ಜಯಂತ್ಯುತ್ಸವದ ಸಾನಿಧ್ಯವಹಿಸಿ ಅವರು ಮಾತನಾಡಿದರು.</p>.<p>‘ಅಸ್ಪ್ಯಶ್ಯತೆ ಹೋಗಲಾಡಿಸಿ ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರು ಶ್ರಮಿಸಿದರು. ಬಸವಣ್ಣನವರ ಆದರ್ಶ, ಹೋರಾಟ ಮತ್ತು ಸಾಮಾಜಿಕ ಕಳಕಳಿಯನ್ನು ನಾವು ಈ ಕಾಲಘಟ್ಟದಲ್ಲಿಯೂ ಸ್ಮರಿಸುತ್ತಿದ್ದೇವೆ ಎಂದರೆ ಅವರ ದಿವ್ಯ ಶಕ್ತಿ ಎಷ್ಟಿರಬಹುದು ಎಂಬುದನ್ನು ನಾವು ಅರಿಯಬೇಕಿದೆ ಎಂದು ಹೇಳಿದರು.</p>.<p>ಬಸವಣ್ಣನವರು ಕನ್ನಡ ಭಾಷೆಯ ಮೂಲಕವೇ ಜನರಿಗೆ ಅರಿವು ಮೂಡಿಸಿ ಜನರಲ್ಲಿ ಸಾಮಾಜಿಕ ಅರಿವು ಮೂಡಿಸಿದರು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>