ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಡಘಟ್ಟ ಹಾಗೂ ಹನಕೆರೆ ಬಳಿ ಚೆಕ್ಪೋಸ್ಟ್ ತೆರೆಯಲಾಗಿದೆ. ಬುಧವಾರ ಬೆಂಗಳೂರಿನಿಂದ ಮೈಸೂರಿಗೆ ಗೃಹಸಚಿವರು ಪ್ರಯಾಣಿಸುತ್ತಿದ್ದರು. ಚೆಕ್ಪೋಸ್ಟ್ ಸಿಬ್ಬಂದಿ ಎರಡೂ ಕಡೆ ಕೈತೋರಿಸಿದರೂ ಕಾರು ನಿಲ್ಲಿಸಿಲ್ಲ. ಸಚಿವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗುತ್ತಿದೆ.