<p><strong>ಹಲಗೂರು</strong>: ಸಮೀಪದ ಹುಲ್ಲಾಗಾಲ ಗ್ರಾಮದಲ್ಲಿ ಬಸವೇಶ್ವರ ವಿಮಾನ ಗೋಪುರ ಪುನರ್ ಪ್ರತಿಷ್ಠಾಪನೆ ಮತ್ತು ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮ ಫೆ.8 ಮತ್ತು 9ರಂದು ಎರಡು ದಿನ ನಡೆಯಲಿದೆ.</p>.<p>ಫೆ.8ರಂದು ಸಂಜೆ 6ಗಂಟೆಗೆ ಪುಣ್ಯಾಹ, ಗಣಪತಿ ಪೂಜೆ, ಹೋಮ ನಾಂದಿ, ಅಂಕುರಾರ್ಪಣ, ರಕ್ಷಾ ಸೂತ್ರಧಾರಣ, ರಾಘೋಪ್ನ, ಹೋಮ ಇತ್ಯಾದಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಹಾ ಮಂಗಳಾರತಿ ನಡೆಯಲಿದೆ. ರಾತ್ರಿ 7 ಗಂಟೆಗೆ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಲಿದೆ.</p>.<p>ಫೆ.9 ರಂದು ಬೆಳಿಗ್ಗೆ 6.30ಕ್ಕೆ ಗಂಗೆ ತಡಿಯಿಂದ ಗಂಗೆ ತರುವುದು. ಶ್ರೀ ಬಸವೇಶ್ವರ ಗೋಪುರ ಕಳಸ ಪೂಜಾ ಕಾರ್ಯಕ್ರಮ, ನವಗ್ರಹ ಹೋಮ, ಮಹಾ ಪೂರ್ಣಾಹುತಿ ಮತ್ತು ಮಹಾ ಮಂಗಳಾರತಿ ಕಾರ್ಯಕ್ರಮ ನಡೆಯಲಿದೆ.</p>.<p>ಬೆಳಿಗ್ಗೆ 8 ಗಂಟೆಗೆ ಶಿವಾರ ಉಮೇಶ್ ಮತ್ತು ತಂಡದಿಂದ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ, ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ, ದೊಡ್ಡಚೆನ್ನೀಪುರ ಮಲೆ ಮಹದೇಶ್ವರ ಸ್ವಾಮಿ ಬಸಪ್ಪ, ನಡುಮಾರ್ಗದ ಬಸವೇಶ್ವರ ಸ್ವಾಮಿ, ಬಸಪ್ಪ ದೇವರ ಮೆರವಣಿಗೆ ನಡೆಯಲಿದೆ.</p>.<p>ತುಮಕೂರು ಸಿದ್ದಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮಿ, ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮಿ, ಕನಕಪುರ ದೇಗುಲ ಮಠದ ಚನ್ನಬಸವ ಸ್ವಾಮಿ, <a href="">ಡಿ.ಹಲಸಹಳ್ಳಿ</a> ಗವಿಮಠದ ಷಡಕ್ಷರಿಸ್ವಾಮಿ, ಹಂಗ್ರಾಪುರ ಮಠದ ಬಸವಲಿಂಗ ದೇಶಿಕೇಂದ್ರ ಸ್ವಾಮಿ, ದಬ್ಬಹಳ್ಳಿ ಗುರುಮಠದ ಚನ್ನವೀರಣ್ಣಾರಾಧ್ಯ ಸ್ವಾಮಿ, ಅಗಸನಪುರ ಗುರುಮಠದ ಚಂದ್ರಶೇಖರ್ ಆರಾಧ್ಯ ಅವರು ಪೂಜಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಅಂತರವಳ್ಳಿ, ಹುಲ್ಲಹಳ್ಳಿ, ದಡಮಹಳ್ಳಿ, ಹುಸ್ಕೂರು, ಹುಚ್ಚೇಗೌಡನದೊಡ್ಡಿ, ಚೆನ್ನೀಪುರ, ಬಾಣಗಹಳ್ಳಿ ಸೇರಿದಂತೆ ಹಲ್ಲಾಗಾಲ ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ಸಮೀಪದ ಹುಲ್ಲಾಗಾಲ ಗ್ರಾಮದಲ್ಲಿ ಬಸವೇಶ್ವರ ವಿಮಾನ ಗೋಪುರ ಪುನರ್ ಪ್ರತಿಷ್ಠಾಪನೆ ಮತ್ತು ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮ ಫೆ.8 ಮತ್ತು 9ರಂದು ಎರಡು ದಿನ ನಡೆಯಲಿದೆ.</p>.<p>ಫೆ.8ರಂದು ಸಂಜೆ 6ಗಂಟೆಗೆ ಪುಣ್ಯಾಹ, ಗಣಪತಿ ಪೂಜೆ, ಹೋಮ ನಾಂದಿ, ಅಂಕುರಾರ್ಪಣ, ರಕ್ಷಾ ಸೂತ್ರಧಾರಣ, ರಾಘೋಪ್ನ, ಹೋಮ ಇತ್ಯಾದಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಹಾ ಮಂಗಳಾರತಿ ನಡೆಯಲಿದೆ. ರಾತ್ರಿ 7 ಗಂಟೆಗೆ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಲಿದೆ.</p>.<p>ಫೆ.9 ರಂದು ಬೆಳಿಗ್ಗೆ 6.30ಕ್ಕೆ ಗಂಗೆ ತಡಿಯಿಂದ ಗಂಗೆ ತರುವುದು. ಶ್ರೀ ಬಸವೇಶ್ವರ ಗೋಪುರ ಕಳಸ ಪೂಜಾ ಕಾರ್ಯಕ್ರಮ, ನವಗ್ರಹ ಹೋಮ, ಮಹಾ ಪೂರ್ಣಾಹುತಿ ಮತ್ತು ಮಹಾ ಮಂಗಳಾರತಿ ಕಾರ್ಯಕ್ರಮ ನಡೆಯಲಿದೆ.</p>.<p>ಬೆಳಿಗ್ಗೆ 8 ಗಂಟೆಗೆ ಶಿವಾರ ಉಮೇಶ್ ಮತ್ತು ತಂಡದಿಂದ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ, ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ, ದೊಡ್ಡಚೆನ್ನೀಪುರ ಮಲೆ ಮಹದೇಶ್ವರ ಸ್ವಾಮಿ ಬಸಪ್ಪ, ನಡುಮಾರ್ಗದ ಬಸವೇಶ್ವರ ಸ್ವಾಮಿ, ಬಸಪ್ಪ ದೇವರ ಮೆರವಣಿಗೆ ನಡೆಯಲಿದೆ.</p>.<p>ತುಮಕೂರು ಸಿದ್ದಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮಿ, ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮಿ, ಕನಕಪುರ ದೇಗುಲ ಮಠದ ಚನ್ನಬಸವ ಸ್ವಾಮಿ, <a href="">ಡಿ.ಹಲಸಹಳ್ಳಿ</a> ಗವಿಮಠದ ಷಡಕ್ಷರಿಸ್ವಾಮಿ, ಹಂಗ್ರಾಪುರ ಮಠದ ಬಸವಲಿಂಗ ದೇಶಿಕೇಂದ್ರ ಸ್ವಾಮಿ, ದಬ್ಬಹಳ್ಳಿ ಗುರುಮಠದ ಚನ್ನವೀರಣ್ಣಾರಾಧ್ಯ ಸ್ವಾಮಿ, ಅಗಸನಪುರ ಗುರುಮಠದ ಚಂದ್ರಶೇಖರ್ ಆರಾಧ್ಯ ಅವರು ಪೂಜಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಅಂತರವಳ್ಳಿ, ಹುಲ್ಲಹಳ್ಳಿ, ದಡಮಹಳ್ಳಿ, ಹುಸ್ಕೂರು, ಹುಚ್ಚೇಗೌಡನದೊಡ್ಡಿ, ಚೆನ್ನೀಪುರ, ಬಾಣಗಹಳ್ಳಿ ಸೇರಿದಂತೆ ಹಲ್ಲಾಗಾಲ ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>