<p><strong>ಬೆಳಕವಾಡಿ</strong>: ಗ್ರಾಮದ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಬೀದಿ ನಾಯಿಗಳು 5 ಕುರಿಗಳನ್ನು ಸಾಯಿಸಿ, 5 ಕುರಿಗಳನ್ನು ಗಾಯಗೊಳಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.</p>.<p>ಗ್ರಾಮದ ಶೃುತಿಚಂದ್ರು ಎಂಬುವವರು ತಮ್ಮ ಕುಟುಂಬದ ನಿರ್ವಹಣೆಗಾಗಿ ಕುರಿ ಸಾಕಾಣಿಕೆಯನ್ನು ಅವಲಂಬಿಸಿದ್ದಾರೆ. ಬೀದಿ ನಾಯಿಗಳ ದಾಳಿಯಿಂದಾಗಿ ಸುಮಾರು ₹ 2 ಲಕ್ಷ ಮೌಲ್ಯದ ಕುರಿಗಳನ್ನು ಕಳೆದುಕೊಂಡು ಅವರಿಗೆ ನಷ್ಟವಾಗಿದೆ. ನಮಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಕುರಿ ಮಾಲೀಕ ಶೃುತಿಚಂದ್ರು ಒತ್ತಾಯಿಸಿದ್ದಾರೆ.</p>.<p>ಘಟನೆ ಸ್ಥಳಕ್ಕೆ ಮಳವಳ್ಳಿ ಪಶು ವೈದ್ಯಾಧಿಕಾರಿ, ಸಹಾಯಕ ನಿರ್ದೇಶಕ ಡಾ ಆರ್.ಮಂಜುನಾಥ ಭೇಟಿ ನೀಡಿ ಮೃತ ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿ, ಗಾಯಗೊಂಡ ಕುರಿಗಳಿಗೆ ಚಿಕಿತ್ಸೆ ನೀಡಿದರು. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕೊಡಿಸುವುದಾಗಿ ತಿಳಿಸಿದರು.</p>.<p>ಸ್ಥಳಕ್ಕೆ ತಡವಾಗಿ ಬಂದ ಬೆಳಕವಾಡಿ ಪಶು ಚಿಕಿತ್ಸಾಲಯದ ಮುಖ್ಯ ವೈದ್ಯಾಧಿಕಾರಿ ಡಾ.ಜಿ.ಎನ್. ನಾಗರಾಜು ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ</strong>: ಗ್ರಾಮದ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಬೀದಿ ನಾಯಿಗಳು 5 ಕುರಿಗಳನ್ನು ಸಾಯಿಸಿ, 5 ಕುರಿಗಳನ್ನು ಗಾಯಗೊಳಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.</p>.<p>ಗ್ರಾಮದ ಶೃುತಿಚಂದ್ರು ಎಂಬುವವರು ತಮ್ಮ ಕುಟುಂಬದ ನಿರ್ವಹಣೆಗಾಗಿ ಕುರಿ ಸಾಕಾಣಿಕೆಯನ್ನು ಅವಲಂಬಿಸಿದ್ದಾರೆ. ಬೀದಿ ನಾಯಿಗಳ ದಾಳಿಯಿಂದಾಗಿ ಸುಮಾರು ₹ 2 ಲಕ್ಷ ಮೌಲ್ಯದ ಕುರಿಗಳನ್ನು ಕಳೆದುಕೊಂಡು ಅವರಿಗೆ ನಷ್ಟವಾಗಿದೆ. ನಮಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಕುರಿ ಮಾಲೀಕ ಶೃುತಿಚಂದ್ರು ಒತ್ತಾಯಿಸಿದ್ದಾರೆ.</p>.<p>ಘಟನೆ ಸ್ಥಳಕ್ಕೆ ಮಳವಳ್ಳಿ ಪಶು ವೈದ್ಯಾಧಿಕಾರಿ, ಸಹಾಯಕ ನಿರ್ದೇಶಕ ಡಾ ಆರ್.ಮಂಜುನಾಥ ಭೇಟಿ ನೀಡಿ ಮೃತ ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿ, ಗಾಯಗೊಂಡ ಕುರಿಗಳಿಗೆ ಚಿಕಿತ್ಸೆ ನೀಡಿದರು. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕೊಡಿಸುವುದಾಗಿ ತಿಳಿಸಿದರು.</p>.<p>ಸ್ಥಳಕ್ಕೆ ತಡವಾಗಿ ಬಂದ ಬೆಳಕವಾಡಿ ಪಶು ಚಿಕಿತ್ಸಾಲಯದ ಮುಖ್ಯ ವೈದ್ಯಾಧಿಕಾರಿ ಡಾ.ಜಿ.ಎನ್. ನಾಗರಾಜು ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>