<p><strong>ಬೆಳಕವಾಡಿ: ‘</strong>ಹಿಂದಿನ ಕಾಲದಲ್ಲಿ ಮಕ್ಕಳು ಗೋಲಿ, ಆಣೆ ಕಲ್ಲು, ಸೇರಿದಂತೆ ವಿವಿಧ ಗ್ರಾಮೀಣ ಆಟಗಳನ್ನು ಆಡುವುದರಿಂದ ಅವರ ಮನಸ್ಸಿನಲ್ಲಿ ಏಕಾಗ್ರತೆ ಬರುತ್ತಿತ್ತು. ಆದರೆ ಈಗಿನ ಮಕ್ಕಳು ಮೊಬೈಲ್ ಬಿಟ್ಟು ಬಯಲಿಗೆ ಬರಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ. ಶ್ರೀನಿವಾಸ್ ಸಲಹೆ ನೀಡಿದರು.</p>.<p>ಹೊಸಹಳ್ಳಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಅಕ್ಕರೆಯ ಅಂಗಳ’ ಸಕ್ಕರೆ ನಾಡಿನ ಮಕ್ಕಳಿಗಾಗಿ ವಿಶೇಷ ಗ್ರಾಮೀಣ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಬಿರದಲ್ಲಿ ಗ್ರಾಮೀಣ ಕ್ರೀಡೆಯ ಆಟಗಳ ಜೊತೆಗೆ ಇಂಗ್ಲಿಷ್, ಗಣಿತ ಕಲಿಸಲಾಗುತ್ತದೆ. ಪ್ರತಿ ಮಕ್ಕಳಲ್ಲಿ ಒಂದೊಂದು ಪ್ರತಿಭೆ ಇದ್ದು, ಅದನ್ನು ಗುರುತಿಸುವುದಕ್ಕೆ ಬೇಸಿಗೆ ಶಿಬಿರ ಸಹಕಾರಿಯಾಗಲಿದೆ. ಏ.17ರಿಂದ ಮೇ.26ರವರೆಗೆ ಶಿಬಿರ ನಡೆಯಲಿದ್ದು, ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಇರುತ್ತದೆ’ ಎಂದರು.</p>.<p>ನೋಡಲ್ ಅಧಿಕಾರಿಯಾದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಬಿ. ಪ್ರತಿಭಾ ಮಾತನಾಡಿದರು. ಶಿಬಿರದಲ್ಲಿ 65 ಮಕ್ಕಳು ಭಾಗವಹಿಸಿದ್ದು, ಅವರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಬಿ. ವಿಜಯ್ ಕುಮಾರ್, ಪಿಡಿಒ ಎಚ್.ಸಿ.ಕುಮಾರ್, ಪ್ರಭಾರ ಮುಖ್ಯಶಿಕ್ಷಕಿ ಭಾಗ್ಯ, ಸಹಶಿಕ್ಷಕರು, ಗ್ರಂಥಾಲಯ ಮೇಲ್ವಿಚಾರಕಿ ಪುಟ್ಟ ವೆಂಕಟಮ್ಮ, ಎಸ್ ಡಿ ಎ ಜಯಲಕ್ಷ್ಮಿ, ಸುನೀಲ್, ಎಚ್.ಎಸ್. ನಾಗೇಂದ್ರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ: ‘</strong>ಹಿಂದಿನ ಕಾಲದಲ್ಲಿ ಮಕ್ಕಳು ಗೋಲಿ, ಆಣೆ ಕಲ್ಲು, ಸೇರಿದಂತೆ ವಿವಿಧ ಗ್ರಾಮೀಣ ಆಟಗಳನ್ನು ಆಡುವುದರಿಂದ ಅವರ ಮನಸ್ಸಿನಲ್ಲಿ ಏಕಾಗ್ರತೆ ಬರುತ್ತಿತ್ತು. ಆದರೆ ಈಗಿನ ಮಕ್ಕಳು ಮೊಬೈಲ್ ಬಿಟ್ಟು ಬಯಲಿಗೆ ಬರಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ. ಶ್ರೀನಿವಾಸ್ ಸಲಹೆ ನೀಡಿದರು.</p>.<p>ಹೊಸಹಳ್ಳಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಅಕ್ಕರೆಯ ಅಂಗಳ’ ಸಕ್ಕರೆ ನಾಡಿನ ಮಕ್ಕಳಿಗಾಗಿ ವಿಶೇಷ ಗ್ರಾಮೀಣ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಬಿರದಲ್ಲಿ ಗ್ರಾಮೀಣ ಕ್ರೀಡೆಯ ಆಟಗಳ ಜೊತೆಗೆ ಇಂಗ್ಲಿಷ್, ಗಣಿತ ಕಲಿಸಲಾಗುತ್ತದೆ. ಪ್ರತಿ ಮಕ್ಕಳಲ್ಲಿ ಒಂದೊಂದು ಪ್ರತಿಭೆ ಇದ್ದು, ಅದನ್ನು ಗುರುತಿಸುವುದಕ್ಕೆ ಬೇಸಿಗೆ ಶಿಬಿರ ಸಹಕಾರಿಯಾಗಲಿದೆ. ಏ.17ರಿಂದ ಮೇ.26ರವರೆಗೆ ಶಿಬಿರ ನಡೆಯಲಿದ್ದು, ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಇರುತ್ತದೆ’ ಎಂದರು.</p>.<p>ನೋಡಲ್ ಅಧಿಕಾರಿಯಾದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಬಿ. ಪ್ರತಿಭಾ ಮಾತನಾಡಿದರು. ಶಿಬಿರದಲ್ಲಿ 65 ಮಕ್ಕಳು ಭಾಗವಹಿಸಿದ್ದು, ಅವರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಬಿ. ವಿಜಯ್ ಕುಮಾರ್, ಪಿಡಿಒ ಎಚ್.ಸಿ.ಕುಮಾರ್, ಪ್ರಭಾರ ಮುಖ್ಯಶಿಕ್ಷಕಿ ಭಾಗ್ಯ, ಸಹಶಿಕ್ಷಕರು, ಗ್ರಂಥಾಲಯ ಮೇಲ್ವಿಚಾರಕಿ ಪುಟ್ಟ ವೆಂಕಟಮ್ಮ, ಎಸ್ ಡಿ ಎ ಜಯಲಕ್ಷ್ಮಿ, ಸುನೀಲ್, ಎಚ್.ಎಸ್. ನಾಗೇಂದ್ರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>