<p><strong>ಹಲಗೂರು</strong>: ‘ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕುತ್ತಿದ್ದು, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ’ ಎಂದು ಮಳವಳ್ಳಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ ತಿಳಿಸಿದರು.</p>.<p>ಸಮೀಪದ ಬಾಣಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಶರಸಾಗರ-4’ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಾಸಕ ನರೇಂದ್ರಸ್ವಾಮಿ ಅವರ ಕಾಳಜಿಯಿಂದಾಗಿ ಎಲ್ಲಾ ಸರ್ಕಾರಿ ಶಾಲೆಗಳಿಗೂ ಮೂಲಸೌಕರ್ಯಗಳನ್ನು ಒದಗಿಸಿ, ಸ್ಮಾರ್ಟ್ ತರಗತಿಗಳನ್ನು ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಕಿರುತೆರೆ ನಟ ಕೀರ್ತಿ ಭಾನು, ಸಂಚಯ ಗಣೇಶ್, ಕಾಮಿಡಿ ಕಿಲಾಡಿ ಖ್ಯಾತಿಯ ಅಭಿಜಿತ್ ಗೌಡ, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಎಂ.ಕೆ.ಶ್ರೀನಿವಾಸ್, ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿದರು.</p>.<p>ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಡಿ.ಹಲಸಹಳ್ಳಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್, ಮುಖ್ಯ ಶಿಕ್ಷಕ ಜಿ.ಎಸ್.ರವಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಸವರಾಜು, ರಾಮಕೃಷ್ಣ, ಕೃಷ್ಣ, ಮಲ್ಲೇಶ್, ರಾಮಚಂದ್ರ, ಶಿವಣ್ಣ, ಶಿವಮಲ್ಲಮ್ಮ, ಆನಂದ, ಲಕ್ಷ್ಮಪ್ಪ, ಶಿವಕುಮಾರ್, ಮನು, ಶಿಕ್ಷಕರಾದ ಆನಂದ, ರುಕ್ಮಿಣಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ‘ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕುತ್ತಿದ್ದು, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ’ ಎಂದು ಮಳವಳ್ಳಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ ತಿಳಿಸಿದರು.</p>.<p>ಸಮೀಪದ ಬಾಣಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಶರಸಾಗರ-4’ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಾಸಕ ನರೇಂದ್ರಸ್ವಾಮಿ ಅವರ ಕಾಳಜಿಯಿಂದಾಗಿ ಎಲ್ಲಾ ಸರ್ಕಾರಿ ಶಾಲೆಗಳಿಗೂ ಮೂಲಸೌಕರ್ಯಗಳನ್ನು ಒದಗಿಸಿ, ಸ್ಮಾರ್ಟ್ ತರಗತಿಗಳನ್ನು ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಕಿರುತೆರೆ ನಟ ಕೀರ್ತಿ ಭಾನು, ಸಂಚಯ ಗಣೇಶ್, ಕಾಮಿಡಿ ಕಿಲಾಡಿ ಖ್ಯಾತಿಯ ಅಭಿಜಿತ್ ಗೌಡ, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಎಂ.ಕೆ.ಶ್ರೀನಿವಾಸ್, ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿದರು.</p>.<p>ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಡಿ.ಹಲಸಹಳ್ಳಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್, ಮುಖ್ಯ ಶಿಕ್ಷಕ ಜಿ.ಎಸ್.ರವಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಸವರಾಜು, ರಾಮಕೃಷ್ಣ, ಕೃಷ್ಣ, ಮಲ್ಲೇಶ್, ರಾಮಚಂದ್ರ, ಶಿವಣ್ಣ, ಶಿವಮಲ್ಲಮ್ಮ, ಆನಂದ, ಲಕ್ಷ್ಮಪ್ಪ, ಶಿವಕುಮಾರ್, ಮನು, ಶಿಕ್ಷಕರಾದ ಆನಂದ, ರುಕ್ಮಿಣಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>