<p><strong>ಹಲಗೂರು:</strong> ರೈತರ ಧ್ವನಿಯಾಗಿದ್ದ ಮಹಾರಾಜರು ಕನ್ನಂಬಾಡಿ ಅಣೆಕಟ್ಟು ನಿರ್ಮಿಸಿದ್ದು, ನೀರಾವರಿಯಿಂದಾಗಿ ಮಂಡ್ಯ ಜಿಲ್ಲೆಯ ರೈತರು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಕೆ. ಕುಮಾರ್ ತಿಳಿಸಿದರು.</p>.<p>ಲಯನ್ಸ್ ಕ್ಲಬ್ ಅಫ್ ಹಲಗೂರು ವತಿಯಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನದ ಪ್ರಯುಕ್ತ ಹಲಗೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೊರ ರೋಗಿಗಳಿಗೆ ಉಪಹಾರ ವಿತರಿಸಿ ಅವರು ಮಾತನಾಡಿದರು.</p>.<p>ಕನ್ನಂಬಾಡಿ ಕಟ್ಟೆಯನ್ನು ಕಟ್ಟಿದ ಪ್ರತಿಫಲದಿಂದಾಗಿ ಮಂಡ್ಯ ನೀರಾವರಿ ಪ್ರದೇಶ ಆಗಿದ್ದಲ್ಲದೇ, ನಾಡಿನ ಜನರಿಗೆ ನೀರು ಸಿಗುತ್ತಿದೆ. ನಾಲ್ವಡಿಯವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ಹಿನ್ನೆಲೆಯಲ್ಲಿ ಮಳವಳ್ಳಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ವಿದ್ಯಾವಂತರನ್ನು ಕಾಣಬಹುದಾಗಿದೆ ಎಂದರು.</p>.<p>ಲಯನ್ಸ್ ಕ್ಲಬ್ ಕಾರ್ಯದರ್ಶಿ ಡಿ.ಎಲ್.ಮಾದೇಗೌಡ, ಖಜಾಂಚಿ ಕೆ.ಶಿವರಾಜು, ಸದಸ್ಯರಾದ ಎಚ್.ವಿ. ರಾಜಣ್ಣ, ಎ.ಎಸ್. ದೇವರಾಜು, ಮನೋಹರ್, ಜಯಶಂಕರ್, ಶ್ರೀನಿವಾಸಾಚಾರಿ, ಪ್ರವೀಣ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು:</strong> ರೈತರ ಧ್ವನಿಯಾಗಿದ್ದ ಮಹಾರಾಜರು ಕನ್ನಂಬಾಡಿ ಅಣೆಕಟ್ಟು ನಿರ್ಮಿಸಿದ್ದು, ನೀರಾವರಿಯಿಂದಾಗಿ ಮಂಡ್ಯ ಜಿಲ್ಲೆಯ ರೈತರು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಕೆ. ಕುಮಾರ್ ತಿಳಿಸಿದರು.</p>.<p>ಲಯನ್ಸ್ ಕ್ಲಬ್ ಅಫ್ ಹಲಗೂರು ವತಿಯಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನದ ಪ್ರಯುಕ್ತ ಹಲಗೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೊರ ರೋಗಿಗಳಿಗೆ ಉಪಹಾರ ವಿತರಿಸಿ ಅವರು ಮಾತನಾಡಿದರು.</p>.<p>ಕನ್ನಂಬಾಡಿ ಕಟ್ಟೆಯನ್ನು ಕಟ್ಟಿದ ಪ್ರತಿಫಲದಿಂದಾಗಿ ಮಂಡ್ಯ ನೀರಾವರಿ ಪ್ರದೇಶ ಆಗಿದ್ದಲ್ಲದೇ, ನಾಡಿನ ಜನರಿಗೆ ನೀರು ಸಿಗುತ್ತಿದೆ. ನಾಲ್ವಡಿಯವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ಹಿನ್ನೆಲೆಯಲ್ಲಿ ಮಳವಳ್ಳಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ವಿದ್ಯಾವಂತರನ್ನು ಕಾಣಬಹುದಾಗಿದೆ ಎಂದರು.</p>.<p>ಲಯನ್ಸ್ ಕ್ಲಬ್ ಕಾರ್ಯದರ್ಶಿ ಡಿ.ಎಲ್.ಮಾದೇಗೌಡ, ಖಜಾಂಚಿ ಕೆ.ಶಿವರಾಜು, ಸದಸ್ಯರಾದ ಎಚ್.ವಿ. ರಾಜಣ್ಣ, ಎ.ಎಸ್. ದೇವರಾಜು, ಮನೋಹರ್, ಜಯಶಂಕರ್, ಶ್ರೀನಿವಾಸಾಚಾರಿ, ಪ್ರವೀಣ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>