‘ರೈತರ ಕಷ್ಟವನ್ನು ರಾಜ್ಯ, ಕೇಂದ್ರ ಸರ್ಕಾರಗಳು ಕೇಳುತ್ತಿಲ್ಲ. ರಾಜ್ಯಕೀಯ ವ್ಯಕ್ತಿಗಳಿಗೆ ಅವರದೇ ಆದ ಕಾರ್ಯದೊತ್ತಡದಿಂದ ಜನರ ಸಮಸ್ಯೆ ಆಲಿಸಲು, ಬರಗಾಲ ನಿರ್ವಹಣೆ ಮಾಡಲು ಆಗುತ್ತಿಲ್ಲ. ರೈತರ ಬಗ್ಗೆ ನಿರ್ಲಕ್ಷ್ಯಧೋರಣೆ ತಳೆದಿದ್ದು, ಕೊನೆಗೆ ದೇವರ ಕೃಪೆಯಾದರೂ ದೊರಕುವುದೇನೋ ಎಂಬ ಆಸೆಯಿಂದ ಮಳೆಗಾಗಿ ದೇವರ ಮೋರೆಹೋಗಬೇಕಾದ ದಯನೀಯ ಸ್ಥಿತಿ ನಮ್ಮದಾಗಿದೆ. ಬರದ ಸಮಯದಲ್ಲಿ ಹಿರಿಯರು ಮಾಡುತ್ತಿದ್ದಂತೆ ಸಂಪ್ರದಾಯಬದ್ಧವಾಗಿ ಕಪ್ಪೆಗಳಿಗೆ ಮದುವೆ ಮಾಡಿಸಿ, ಮಳೆರಾಯನನ್ನು ಪ್ರಾರ್ಥಸಿದ್ದೇವೆ’ ಎಂದು ಗ್ರಾಮಸ್ಥರು ತಿಳಿಸಿದರು. ಕಾಡನಪುರದದೊಡ್ಡಿ, ಮಣಿಗೆರೆಯ 500ಕ್ಕೂ ಹೆಚ್ಚು ಗ್ರಾಮಸ್ಥರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದ್ದರು.