<p><strong>ಕೆ.ಆರ್.ಪೇಟೆ: </strong>ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಶೀಳನೆರೆ ಹೋಬಳಿಯ ಹುಣಸನಹಳ್ಳಿ ಗ್ರಾಮದಿಂದ ಬಳ್ಳೇಕೆರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿದ್ದು, ಗ್ರಾಮದ ಸಂಪರ್ಕ ಕಡಿದುಕೊಂಡಿದೆ.</p>.<p>ಹುಣಸನಹಳ್ಳಿ ಕೆರೆ ಕೋಡಿಬಿದ್ದು ಅಪಾರ ಪ್ರಮಾಣದ ನೀರು ನುಗ್ಗಿದ ಪರಿಣಾಮ ಸಿಮೆಂಟ್ ಪೈಪ್ ಹಾಕಿ ನಿರ್ಮಾಣ ಮಾಡಿದ್ದ ಸೇತುವೆ ಕೊಚ್ಚಿಹೋಗಿದೆ. ಈ ಸಂದರ್ಭ ಕಾರೊಂದು ಹಳ್ಳಕ್ಕೆ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಭಸದಿಂದ ಹರಿದ ನೀರು ಅಕ್ಕಪಕ್ಕದ ಭತ್ತದ ಗದ್ದೆಗೆ ನುಗ್ಗಿ ಸುಮಾರು ಹತ್ತು ಎಕರೆಗೂ ಹೆಚ್ಚು ಭೂಮಿಯಲ್ಲಿ ಬೆಳೆದಿದ್ದ ಭತ್ತದ ಫಸಲು ನಾಶವಾಗಿದೆ.</p>.<p>ತಹಶಿಲ್ದಾರ್ ಎಂ.ಶಿವಮೂರ್ತಿ ಘಟನಾ ಸ್ಥಳ ಪರಿಶೀಲನೆ ನಡೆಸಿದರು.</p>.<p>ತಾಲ್ಲೂಕಿನಾದ್ಯಂತ ಸುರಿಯು ತ್ತಿರುವ ಮಳೆಯಿಂದಾಗಿ ಆಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಕೃಷಿ, ತೋಟಗಾರಿಕೆ, ಕಂದಾಯ, ಲೋಕೋಪಯೋಗಿ ಇಲಾಖೆಗಳಿಗೆ ಸೂಚಿಸಲಾಗಿದೆ. ವರದಿ ಬಂದ ಕೂಡಲೇ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.</p>.<p>ಶೀಳನೆರೆ ಹೋಬಳಿಯ ರಾಜಸ್ವ ನಿರೀಕ್ಷಕ ಪುರುಷೋತ್ತಮ, ಗ್ರಾಮ ಲೆಕ್ಕಾಧಿಕಾರಿಗಳಾದ ಸುಮನ್, ಸುಧಾಕರ, ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ: </strong>ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಶೀಳನೆರೆ ಹೋಬಳಿಯ ಹುಣಸನಹಳ್ಳಿ ಗ್ರಾಮದಿಂದ ಬಳ್ಳೇಕೆರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿದ್ದು, ಗ್ರಾಮದ ಸಂಪರ್ಕ ಕಡಿದುಕೊಂಡಿದೆ.</p>.<p>ಹುಣಸನಹಳ್ಳಿ ಕೆರೆ ಕೋಡಿಬಿದ್ದು ಅಪಾರ ಪ್ರಮಾಣದ ನೀರು ನುಗ್ಗಿದ ಪರಿಣಾಮ ಸಿಮೆಂಟ್ ಪೈಪ್ ಹಾಕಿ ನಿರ್ಮಾಣ ಮಾಡಿದ್ದ ಸೇತುವೆ ಕೊಚ್ಚಿಹೋಗಿದೆ. ಈ ಸಂದರ್ಭ ಕಾರೊಂದು ಹಳ್ಳಕ್ಕೆ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಭಸದಿಂದ ಹರಿದ ನೀರು ಅಕ್ಕಪಕ್ಕದ ಭತ್ತದ ಗದ್ದೆಗೆ ನುಗ್ಗಿ ಸುಮಾರು ಹತ್ತು ಎಕರೆಗೂ ಹೆಚ್ಚು ಭೂಮಿಯಲ್ಲಿ ಬೆಳೆದಿದ್ದ ಭತ್ತದ ಫಸಲು ನಾಶವಾಗಿದೆ.</p>.<p>ತಹಶಿಲ್ದಾರ್ ಎಂ.ಶಿವಮೂರ್ತಿ ಘಟನಾ ಸ್ಥಳ ಪರಿಶೀಲನೆ ನಡೆಸಿದರು.</p>.<p>ತಾಲ್ಲೂಕಿನಾದ್ಯಂತ ಸುರಿಯು ತ್ತಿರುವ ಮಳೆಯಿಂದಾಗಿ ಆಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಕೃಷಿ, ತೋಟಗಾರಿಕೆ, ಕಂದಾಯ, ಲೋಕೋಪಯೋಗಿ ಇಲಾಖೆಗಳಿಗೆ ಸೂಚಿಸಲಾಗಿದೆ. ವರದಿ ಬಂದ ಕೂಡಲೇ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.</p>.<p>ಶೀಳನೆರೆ ಹೋಬಳಿಯ ರಾಜಸ್ವ ನಿರೀಕ್ಷಕ ಪುರುಷೋತ್ತಮ, ಗ್ರಾಮ ಲೆಕ್ಕಾಧಿಕಾರಿಗಳಾದ ಸುಮನ್, ಸುಧಾಕರ, ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>