<p><strong>ಮಂಡ್ಯ:</strong> ‘ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರಿದ್ದು ಬದಲಿ ಇಂಧನದತ್ತ ಗಮನ ಹರಿಸುವುದು ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ಜೈವಿಕ ಇಂಧನ ಮುಂದಿನ ಪೀಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ’ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್.ಯು.ತಳವಾರ ಹೇಳಿದರು.</p>.<p>ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರದ ವತಿಯಿಂದ ರೂಪಿಸಲಾಗಿರುವ ಜೈವಿಕ ಇಂಧನ ಘಟಕ ಮತ್ತು ಜೈವಿಕ ಪದಾರ್ಥಗಳ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅತ್ಯಂಕ ಕಡಿಮೆ ಖರ್ಚಿನಲ್ಲಿ ಇಂಧನದ ಬೇಡಿಕೆ ಪೂರೈಸಬಲ್ಲ ಬದಲಿ ಇಂಧನದ ಹುಡುಕಾಟ ಅತ್ಯಾವಶ್ಯಕವಾಗಿದೆ. ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಜೈವಿಕ ಇಂಧನ ಘಟಕ ಸ್ಥಾಪಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ದೇಶ–ವಿದೇಶದಲ್ಲಿ ಪ್ರಸಿದ್ಧಿ ಪಡೆದಿರುವ ಪಿಇಟಿ ಸಂಸ್ಥೆಯಿಂದ ಇನ್ನಷ್ಟು ಉತ್ತಮ ಕೆಲಸಗಳು ಆಗಬೇಕು’ ಎಂದರು.</p>.<p>‘ಜೈವಿಕ ಇಂಧನ ಸಂಶೋಧನಾ ಕೇಂದ್ರದಲ್ಲಿ ಇಂಧನ ಮಾತ್ರವಲ್ಲದೇ ಅದರ ಉಪ ಉತ್ಪನ್ನಗಳನ್ನೂ ತಯಾರಿಸಲಾಗಿದೆ. ಜನರು ಇದರ ಹೆಚ್ಚಿನ ಮಾಹಿತಿ ಪಡೆದು ಬಳಕೆ ಮಾಡಲು ಮನಸ್ಸು ಮಾಡಬೇಕು. ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಗೆ ಪೂರಕವಾಗಿ ಜೈವಿಕ ಇಂಧನ ಅಭಿಯಾನ ನಡೆಸಬಹುದು’ ಎಂದರು.</p>.<p>‘ಸಂಸ್ಥೆಯ ಹಿರಿಯರಾದ ಡಾ.ಎಚ್.ಡಿ.ಚೌಡಯ್ಯ ಅವರು ಸಂಸ್ಥೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಸಂಸ್ಥೆಯ ಅಧ್ಯಕ್ಷ ಕೆ.ಎಸ್.ವಿಜಯಾನಂದ ಅವರು ಇನ್ನೂ ಹೆಚ್ಚಿನ ಮಟ್ಟಕ್ಕೆ ಕೊಂಡೊಯ್ಯುವ ಹಾದಿಯಲ್ಲಿದ್ದಾರೆ. ದೇಶದಲ್ಲಿ ಮುಂದೆ ಜೈವಿಕ ಇಂಧನಕ್ಕೆ ಹೆಚ್ಚಿನ ಆದ್ಯತೆ ದೊರಕಲಿದೆ. ಪಿಇಎಸ್ ಸಂಸ್ಥೆ ಈ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಲಿದೆ’ ಎಂದರು.</p>.<p>‘ಬಾಗಲಕೋಟೆ ಎಂಜಿನಿಯರ್ ಕಾಲೇಜಿನಲ್ಲಿ ಜೈವಿಕ ಇಂಧನ ಘಟಕ ಆರಂಭಿಸಿದ್ದು, ಬೇರೆ ಸಂಸ್ಥೆಗಳು ಸಹ ಈ ನಿಟ್ಟಿನಲ್ಲಿ ಮುಂದಾಗಬೇಕಿದೆ. ಜೈವಿಕ ಡೀಸೆಲ್ ಬಳಕೆ ಹಾಗೂ ಉತ್ಪಾದನೆಯನ್ನು ಹೆಚ್ಚಿಸಬೇಕಿದೆ. ಸರ್ಕಾರ ಕೂಡ ಇಂತಹ ಸಂಸ್ಥೆಗಳಿಗೆ ನೆರವು ನೀಡಬೇಕು. ಇದರಿಂದ ತೈಲ ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬಹುದು’ ಎಂದರು.</p>.<p>ಪಿಇಟಿ ಮಾಜಿ ಅಧ್ಯಕ್ಷ ಡಾ.ಎಚ್.ಡಿ.ಚೌಡಯ್ಯ, ಉಪಾಧ್ಯಕ್ಷ ಬಸವಯ್ಯ, ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್, ನಿರ್ದೇಶಕ ಡಾ.ರಾಮಲಿಂಗಯ್ಯ, ಪ್ರಾಂಶುಪಾಲ ಡಾ.ಎಚ್.ವಿ.ರವೀಂದ್ರ, ಡಾ.ಎಲ್.ಪ್ರಸನ್ನಕುಮಾರ್, ಡಾ.ರೂಪೇಶ್, ಡಾ.ಮುರಳಿಕೃಷ್ಣ, ಡಾ.ದಿನೇಶ್ ಪ್ರಭು, ಡಾ.ಬಿ.ಎಸ್.ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರಿದ್ದು ಬದಲಿ ಇಂಧನದತ್ತ ಗಮನ ಹರಿಸುವುದು ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ಜೈವಿಕ ಇಂಧನ ಮುಂದಿನ ಪೀಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ’ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್.ಯು.ತಳವಾರ ಹೇಳಿದರು.</p>.<p>ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರದ ವತಿಯಿಂದ ರೂಪಿಸಲಾಗಿರುವ ಜೈವಿಕ ಇಂಧನ ಘಟಕ ಮತ್ತು ಜೈವಿಕ ಪದಾರ್ಥಗಳ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅತ್ಯಂಕ ಕಡಿಮೆ ಖರ್ಚಿನಲ್ಲಿ ಇಂಧನದ ಬೇಡಿಕೆ ಪೂರೈಸಬಲ್ಲ ಬದಲಿ ಇಂಧನದ ಹುಡುಕಾಟ ಅತ್ಯಾವಶ್ಯಕವಾಗಿದೆ. ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಜೈವಿಕ ಇಂಧನ ಘಟಕ ಸ್ಥಾಪಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ದೇಶ–ವಿದೇಶದಲ್ಲಿ ಪ್ರಸಿದ್ಧಿ ಪಡೆದಿರುವ ಪಿಇಟಿ ಸಂಸ್ಥೆಯಿಂದ ಇನ್ನಷ್ಟು ಉತ್ತಮ ಕೆಲಸಗಳು ಆಗಬೇಕು’ ಎಂದರು.</p>.<p>‘ಜೈವಿಕ ಇಂಧನ ಸಂಶೋಧನಾ ಕೇಂದ್ರದಲ್ಲಿ ಇಂಧನ ಮಾತ್ರವಲ್ಲದೇ ಅದರ ಉಪ ಉತ್ಪನ್ನಗಳನ್ನೂ ತಯಾರಿಸಲಾಗಿದೆ. ಜನರು ಇದರ ಹೆಚ್ಚಿನ ಮಾಹಿತಿ ಪಡೆದು ಬಳಕೆ ಮಾಡಲು ಮನಸ್ಸು ಮಾಡಬೇಕು. ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಗೆ ಪೂರಕವಾಗಿ ಜೈವಿಕ ಇಂಧನ ಅಭಿಯಾನ ನಡೆಸಬಹುದು’ ಎಂದರು.</p>.<p>‘ಸಂಸ್ಥೆಯ ಹಿರಿಯರಾದ ಡಾ.ಎಚ್.ಡಿ.ಚೌಡಯ್ಯ ಅವರು ಸಂಸ್ಥೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಸಂಸ್ಥೆಯ ಅಧ್ಯಕ್ಷ ಕೆ.ಎಸ್.ವಿಜಯಾನಂದ ಅವರು ಇನ್ನೂ ಹೆಚ್ಚಿನ ಮಟ್ಟಕ್ಕೆ ಕೊಂಡೊಯ್ಯುವ ಹಾದಿಯಲ್ಲಿದ್ದಾರೆ. ದೇಶದಲ್ಲಿ ಮುಂದೆ ಜೈವಿಕ ಇಂಧನಕ್ಕೆ ಹೆಚ್ಚಿನ ಆದ್ಯತೆ ದೊರಕಲಿದೆ. ಪಿಇಎಸ್ ಸಂಸ್ಥೆ ಈ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಲಿದೆ’ ಎಂದರು.</p>.<p>‘ಬಾಗಲಕೋಟೆ ಎಂಜಿನಿಯರ್ ಕಾಲೇಜಿನಲ್ಲಿ ಜೈವಿಕ ಇಂಧನ ಘಟಕ ಆರಂಭಿಸಿದ್ದು, ಬೇರೆ ಸಂಸ್ಥೆಗಳು ಸಹ ಈ ನಿಟ್ಟಿನಲ್ಲಿ ಮುಂದಾಗಬೇಕಿದೆ. ಜೈವಿಕ ಡೀಸೆಲ್ ಬಳಕೆ ಹಾಗೂ ಉತ್ಪಾದನೆಯನ್ನು ಹೆಚ್ಚಿಸಬೇಕಿದೆ. ಸರ್ಕಾರ ಕೂಡ ಇಂತಹ ಸಂಸ್ಥೆಗಳಿಗೆ ನೆರವು ನೀಡಬೇಕು. ಇದರಿಂದ ತೈಲ ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬಹುದು’ ಎಂದರು.</p>.<p>ಪಿಇಟಿ ಮಾಜಿ ಅಧ್ಯಕ್ಷ ಡಾ.ಎಚ್.ಡಿ.ಚೌಡಯ್ಯ, ಉಪಾಧ್ಯಕ್ಷ ಬಸವಯ್ಯ, ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್, ನಿರ್ದೇಶಕ ಡಾ.ರಾಮಲಿಂಗಯ್ಯ, ಪ್ರಾಂಶುಪಾಲ ಡಾ.ಎಚ್.ವಿ.ರವೀಂದ್ರ, ಡಾ.ಎಲ್.ಪ್ರಸನ್ನಕುಮಾರ್, ಡಾ.ರೂಪೇಶ್, ಡಾ.ಮುರಳಿಕೃಷ್ಣ, ಡಾ.ದಿನೇಶ್ ಪ್ರಭು, ಡಾ.ಬಿ.ಎಸ್.ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>