ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕೋಮು ಸಾಮರಸ್ಯ ಕದಡುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಗುಜರಾತ್ನಲ್ಲಿ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಉಳಿಗಾಲ ಇಲ್ಲವಾಗಿದೆ. ಪ್ರತಿಯೊಬ್ಬ ಜನಪ್ರತಿನಿಧಿಗೆ ಕೋಮುಗಲಭೆ ಹೆಚ್ಚಿಸುವಂತೆ ಸೂಚನೆ ನೀಡುತ್ತಿದ್ದಾರೆ. ಹಿಂದೂ–ಮುಸ್ಲಿಮರನ್ನು ಬೇರೆ ಬೇರೆ ಮಾಡಿದರೆ ಹೆಚ್ಚು ಮತ ಪಡೆಯಬಹುದು ಎಂಬುದು ಬಿಜೆಪಿಯವರ ಲೆಕ್ಕಾಚಾರವಾಗಿದೆ’ ಎಂದರು.