<p>ಮಂಡ್ಯ: ‘ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿಲ್ಲೆಯಲ್ಲಿ ಮೊದಲ ಸಮಾವೇಶ ಫೆ.22ರಂದು ನಗರದ ಮೈಷುಗರ್ ಕಾರ್ಖಾನೆ ಮೈದಾನದಲ್ಲಿ ನಡೆಸಲಿದೆ. ಈ ಸಮಾರಂಭದಲ್ಲಿ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ’ಎಂದು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಜಗದೀಶ್ ಹಿರೇಮನಿ ಹೇಳಿದರು.</p>.<p>‘ಕೇಂದ್ರ ನಾಯಕ ಅಮಿತ್ ಶಾ ಅವರು ಈಗಾಗಲೇ ಮಂಡ್ಯ ಭಾಗಕ್ಕೆ ಬಂದು ಹೋಗಿರುವ ಕಾರಣ ಕಾಯಕರ್ತರಲ್ಲಿ ಹೊಸ ಉತ್ಸಾಹ ಬಂದಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸದೃಢಗೊಳ್ಳುತ್ತಿದೆ. 2019ರ ವಿಧಾನಸಭೆ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆಯಲ್ಲಿ ಪಕ್ಷಕ್ಕೆ ಐತಿಹಾಸಿಕ ಗೆಲುವು ದಾಖಲಿಸಿರುವುದೇ ಇದಕ್ಕೆ ಸಾಕ್ಷಿ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಕೇಂದ್ರ ಹಾಗೂ ರಾಜ್ಯದ ಸರ್ಕಾರಗಳ ಸಾಧನೆಗಳನ್ನು ಜನತೆಯ ಮುಂದಿಡುವ ಕೆಲಸ ಮಾಡಲಾಗುವುದು. ಈ ಉದ್ದೇಶದಿಂದ ರಾಜ್ಯದಾದ್ಯಂತ ಸಭೆ ನಡೆಸಲಾಗುವುದು. ಅಭಿವೃದ್ಧಿ ವಿಚಾರವಾಗಿ ಪಕ್ಷ ಹೊಂದಿರುವ ದೂರದೃಷ್ಟಿತ್ವವನ್ನು ಮನದಟ್ಟು ಮಾಡುವುದು ನಮ್ಮ ಉದ್ದೇಶವಾಗಿದೆ. ಸದಸ್ಯತ್ವ ನೋಂದಣಿ ಸಮಾವೇಶಗಳ ಮೂಲಕ 2 ಕೋಟಿ ಮತದಾರರನ್ನು ತಲುಪಲಾಗುವುದು. 50 ಲಕ್ಷ ಹೊಸ ಮತದಾರರನ್ನು ಸದಸ್ಯರನ್ನಾಗಿ ನೋಂದಣಿ ಮಾಡುವ ಗುರಿ ಇದೆ’ ಎಂದರು.</p>.<p>‘ಪಕ್ಷದಲ್ಲಿರುವ 7 ಮೋರ್ಚಾಗಳಾದ ಯುವ ಮೋರ್ಚಾ, ಎಸ್ಸಿ, ಎಸ್ಟಿ ಮೋರ್ಚಾ, ಒಬಿಸಿ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಮತ್ತು ಅಲ್ಪಸಂಖ್ಯಾತ ಮೋರ್ಚಾಗಳನ್ನು ಸಕ್ರಿಯಗೊಳಿಸುವ ಗುರಿಯನ್ನು ಸಮಾವೇಶಗಳು ಹೊಂದಿವೆ. ಈ ಸಂದರ್ಭದಲ್ಲಿ ಪ್ರಧಾನಿಯವರ ಅಮೃತ ಕಾಲ ಯೋಜನೆಯನ್ನು ಸಾಕಾರಗೊಳಿಸಲು ತೀರ್ಮಾನಿಸಲಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಪಿ.ಉಮೇಶ್, ಮುಖಂಡರಾದ ಚಂದಗಾಲು ಶಿವಣ್ಣ, ಅಶೋಕ್ ಜಯರಾಂ, ಡಾ.ಇಂದ್ರೇಶ್, ಶೀಳನೆರೆ ಅಂಬರೀಶ್, ಶರಣು ಇದ್ದರು.</p>.<p> ****</p>.<p>ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಕೆಸಿಎನ್</p>.<p>‘ಎರಡು ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವ ಸ್ಥಾನ ವಹಿಸಿಕೊಂಡರೆ ಒತ್ತಡ ಹೆಚ್ಚುತ್ತದೆ. ಹೀಗಾಗಿ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಾಕು ಎಂದು ವರಿಷ್ಠರಿಗೆ ತಿಳಿಸಿದ್ದೇನೆ. ನಾನು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಇದೆಲ್ಲವೂ ಕೇವಲ ಗಾಳಿ ಸುದ್ದಿ, ಇದಕ್ಕೆ ಯಾರೂ ಕಿವಿ ಕೊಡಬಾರದು’ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.</p>.<p>‘ವಿರೋಧಿಗಳು ಇಲ್ಲಸಲ್ಲದ ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ, ನಾನು ಕಾಂಗ್ರೆಸ್ ಹೋಗುತ್ತೇನೆ ಎಂದು ಎಲ್ಲಾದರೂ ಹೇಳಿದ್ದೇನಾ, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಅನಿವಾರ್ಯತೆ ಏನಿದೆ? ಬಿಜೆಪಿಯಲ್ಲೇ ನಾನು ನೆಮ್ಮದಿಯಿಂದ ಇದ್ದೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಹಾಗಾಗಿ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿಲ್ಲೆಯಲ್ಲಿ ಮೊದಲ ಸಮಾವೇಶ ಫೆ.22ರಂದು ನಗರದ ಮೈಷುಗರ್ ಕಾರ್ಖಾನೆ ಮೈದಾನದಲ್ಲಿ ನಡೆಸಲಿದೆ. ಈ ಸಮಾರಂಭದಲ್ಲಿ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ’ಎಂದು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಜಗದೀಶ್ ಹಿರೇಮನಿ ಹೇಳಿದರು.</p>.<p>‘ಕೇಂದ್ರ ನಾಯಕ ಅಮಿತ್ ಶಾ ಅವರು ಈಗಾಗಲೇ ಮಂಡ್ಯ ಭಾಗಕ್ಕೆ ಬಂದು ಹೋಗಿರುವ ಕಾರಣ ಕಾಯಕರ್ತರಲ್ಲಿ ಹೊಸ ಉತ್ಸಾಹ ಬಂದಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸದೃಢಗೊಳ್ಳುತ್ತಿದೆ. 2019ರ ವಿಧಾನಸಭೆ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆಯಲ್ಲಿ ಪಕ್ಷಕ್ಕೆ ಐತಿಹಾಸಿಕ ಗೆಲುವು ದಾಖಲಿಸಿರುವುದೇ ಇದಕ್ಕೆ ಸಾಕ್ಷಿ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಕೇಂದ್ರ ಹಾಗೂ ರಾಜ್ಯದ ಸರ್ಕಾರಗಳ ಸಾಧನೆಗಳನ್ನು ಜನತೆಯ ಮುಂದಿಡುವ ಕೆಲಸ ಮಾಡಲಾಗುವುದು. ಈ ಉದ್ದೇಶದಿಂದ ರಾಜ್ಯದಾದ್ಯಂತ ಸಭೆ ನಡೆಸಲಾಗುವುದು. ಅಭಿವೃದ್ಧಿ ವಿಚಾರವಾಗಿ ಪಕ್ಷ ಹೊಂದಿರುವ ದೂರದೃಷ್ಟಿತ್ವವನ್ನು ಮನದಟ್ಟು ಮಾಡುವುದು ನಮ್ಮ ಉದ್ದೇಶವಾಗಿದೆ. ಸದಸ್ಯತ್ವ ನೋಂದಣಿ ಸಮಾವೇಶಗಳ ಮೂಲಕ 2 ಕೋಟಿ ಮತದಾರರನ್ನು ತಲುಪಲಾಗುವುದು. 50 ಲಕ್ಷ ಹೊಸ ಮತದಾರರನ್ನು ಸದಸ್ಯರನ್ನಾಗಿ ನೋಂದಣಿ ಮಾಡುವ ಗುರಿ ಇದೆ’ ಎಂದರು.</p>.<p>‘ಪಕ್ಷದಲ್ಲಿರುವ 7 ಮೋರ್ಚಾಗಳಾದ ಯುವ ಮೋರ್ಚಾ, ಎಸ್ಸಿ, ಎಸ್ಟಿ ಮೋರ್ಚಾ, ಒಬಿಸಿ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಮತ್ತು ಅಲ್ಪಸಂಖ್ಯಾತ ಮೋರ್ಚಾಗಳನ್ನು ಸಕ್ರಿಯಗೊಳಿಸುವ ಗುರಿಯನ್ನು ಸಮಾವೇಶಗಳು ಹೊಂದಿವೆ. ಈ ಸಂದರ್ಭದಲ್ಲಿ ಪ್ರಧಾನಿಯವರ ಅಮೃತ ಕಾಲ ಯೋಜನೆಯನ್ನು ಸಾಕಾರಗೊಳಿಸಲು ತೀರ್ಮಾನಿಸಲಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಪಿ.ಉಮೇಶ್, ಮುಖಂಡರಾದ ಚಂದಗಾಲು ಶಿವಣ್ಣ, ಅಶೋಕ್ ಜಯರಾಂ, ಡಾ.ಇಂದ್ರೇಶ್, ಶೀಳನೆರೆ ಅಂಬರೀಶ್, ಶರಣು ಇದ್ದರು.</p>.<p> ****</p>.<p>ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಕೆಸಿಎನ್</p>.<p>‘ಎರಡು ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವ ಸ್ಥಾನ ವಹಿಸಿಕೊಂಡರೆ ಒತ್ತಡ ಹೆಚ್ಚುತ್ತದೆ. ಹೀಗಾಗಿ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಾಕು ಎಂದು ವರಿಷ್ಠರಿಗೆ ತಿಳಿಸಿದ್ದೇನೆ. ನಾನು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಇದೆಲ್ಲವೂ ಕೇವಲ ಗಾಳಿ ಸುದ್ದಿ, ಇದಕ್ಕೆ ಯಾರೂ ಕಿವಿ ಕೊಡಬಾರದು’ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.</p>.<p>‘ವಿರೋಧಿಗಳು ಇಲ್ಲಸಲ್ಲದ ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ, ನಾನು ಕಾಂಗ್ರೆಸ್ ಹೋಗುತ್ತೇನೆ ಎಂದು ಎಲ್ಲಾದರೂ ಹೇಳಿದ್ದೇನಾ, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಅನಿವಾರ್ಯತೆ ಏನಿದೆ? ಬಿಜೆಪಿಯಲ್ಲೇ ನಾನು ನೆಮ್ಮದಿಯಿಂದ ಇದ್ದೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಹಾಗಾಗಿ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>