<p><strong>ಮದ್ದೂರು:</strong> ಜಾತಿಗಣತಿ ಪ್ರಸ್ತಾವವನ್ನು ವಿರೋಧಿಸಿ ಪಟ್ಟಣದ ಐಬಿ ವೃತ್ತದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಹಾಗೂ ಚುಂಚಶ್ರೀ ಬಳಗದದಿಂದ ಗುರುವಾರ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಲಾಯಿತು.</p>.<p>ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಕೃಷ್ಣ ಮಾತನಾಡಿ, ‘ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಅವೈಜ್ಞಾನಿಕವಾದ ಜಾತಿಗಣತಿಯನ್ನು ಹೊರತರಬಾರದು. ಇದು ಒಕ್ಕಲಿಗರ ಹಾಗೂ ಲಿಂಗಾಯತ ಸಮುದಾಯದ ವಿರೋಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಮಠಾಧೀಶರು ಇದನ್ನು ಖಂಡಿಸಿ ರಾಜ್ಯ ಸರ್ಕಾರಕ್ಕೆ ಬಿಸಿಮುಟ್ಟಿಸಬೇಕು, ರಾಜ್ಯದಲ್ಲಿ 60 ಒಕ್ಕಲಿಗರು ಹಾಗೂ 70 ಲಕ್ಷ ಲಿಂಗಾಯತರು ಇದ್ದಾರೆ ಕಾಂತರಾಜು ವರದಿಯಲ್ಲಿ ಹೇಳಲಾಗಿದೆ. ಇದರಿಂದಾಗಿ ಸಮುದಾಯದ ಮೀಸಲಾತಿಗೆ ಪೆಟ್ಟು ಬೀಳಲಿದೆ’ ಎಂದರು.</p>.<p>ರಸ್ತೆ ತಡೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ತಾಲ್ಲೂಕು ಅಧ್ಯಕ್ಷ ದೇಶಹಳ್ಳಿ ಪಿ.ಶಿವಪ್ಪ, ರವಿ ಚನ್ನಸಂದ್ರ, ಮಹೇಶ್, ಶಿವಕುಮಾರ್, ರಾಮು, ಮ.ನ. ಪ್ರಸನ್ನ ಕುಮಾರ್, ಸುನಿಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಜಾತಿಗಣತಿ ಪ್ರಸ್ತಾವವನ್ನು ವಿರೋಧಿಸಿ ಪಟ್ಟಣದ ಐಬಿ ವೃತ್ತದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಹಾಗೂ ಚುಂಚಶ್ರೀ ಬಳಗದದಿಂದ ಗುರುವಾರ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಲಾಯಿತು.</p>.<p>ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಕೃಷ್ಣ ಮಾತನಾಡಿ, ‘ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಅವೈಜ್ಞಾನಿಕವಾದ ಜಾತಿಗಣತಿಯನ್ನು ಹೊರತರಬಾರದು. ಇದು ಒಕ್ಕಲಿಗರ ಹಾಗೂ ಲಿಂಗಾಯತ ಸಮುದಾಯದ ವಿರೋಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಮಠಾಧೀಶರು ಇದನ್ನು ಖಂಡಿಸಿ ರಾಜ್ಯ ಸರ್ಕಾರಕ್ಕೆ ಬಿಸಿಮುಟ್ಟಿಸಬೇಕು, ರಾಜ್ಯದಲ್ಲಿ 60 ಒಕ್ಕಲಿಗರು ಹಾಗೂ 70 ಲಕ್ಷ ಲಿಂಗಾಯತರು ಇದ್ದಾರೆ ಕಾಂತರಾಜು ವರದಿಯಲ್ಲಿ ಹೇಳಲಾಗಿದೆ. ಇದರಿಂದಾಗಿ ಸಮುದಾಯದ ಮೀಸಲಾತಿಗೆ ಪೆಟ್ಟು ಬೀಳಲಿದೆ’ ಎಂದರು.</p>.<p>ರಸ್ತೆ ತಡೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ತಾಲ್ಲೂಕು ಅಧ್ಯಕ್ಷ ದೇಶಹಳ್ಳಿ ಪಿ.ಶಿವಪ್ಪ, ರವಿ ಚನ್ನಸಂದ್ರ, ಮಹೇಶ್, ಶಿವಕುಮಾರ್, ರಾಮು, ಮ.ನ. ಪ್ರಸನ್ನ ಕುಮಾರ್, ಸುನಿಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>