<p>ಪಾಂಡವಪುರ: ಪ್ರತಿ ಗ್ರಾಮದಲ್ಲಿ ಡೇರಿಯ ಬಿಎಂಸಿ ಕೇಂದ್ರಗಳನ್ನು ತೆರೆದರೆ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ ಮತ್ತು ಹೈನುಗಾರಿಕೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಾಂತಾಗುತ್ತದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.</p>.<p>ತಾಲ್ಲೂಕಿನ ಬಿಂಡಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ (ಡೇರಿ) ನೂತನವಾಗಿ ಪ್ರಾರಂಭಿಸಲಾಗಿರುವ ಬಿಎಂಸಿ ಕೇಂದ್ರವನ್ನು ಉದ್ಪಾಟಿಸಿ ಮಾತನಾಡಿದರು.</p>.<p>ಬಿಂಡಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮದ ರೈತರ ಅನುಕೂಲಕ್ಕಾಗಿ ಬಿಎಂಸಿ ಕೇಂದ್ರ ಪ್ರಾರಂಭಿಸಲಾಗಿದ್ದು, ಇದರಿಂದ ರೈತರು ಹೈನುಗಾರಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಹೈನುಗಾರಿಕೆ ಲಾಭದಾಯಕವಾಗಿದ್ದು, ರೈತರು ಜೀವನೋಪಾಯ ಮಾರ್ಗವಾಗಿ ಇದನ್ನು ಬಳಸಿಕೊಳ್ಳಬೇಕು ಎಂದರು.</p>.<p>ಮನ್ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಬಿಂಡಹಳ್ಳಿ ಗ್ರಾಮದಲ್ಲಿ 3 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ ಅಳವಡಿಕೆ ಮಾಡಲಾಗಿದೆ. ನಾನು ನಿರ್ದೇಶಕನಾದ ಮೇಲೆ ಚಿಕ್ಕಾಡೆ, ಕ್ಯಾತನಹಳ್ಳಿ, ಅರಳಕುಪ್ಪೆ, ಕೋಡಾಲ, ಎರೇಗೌಡನಹಳ್ಳಿ, ಕಡಬ, ನಾರಾಯಣಪುರ, ಚಿನಕುರಳಿ ಸೇರಿದಂತೆ 10 ಬಿಎಂಸಿ ಕೇಂದ್ರಗಳನ್ನು ಮಂಜೂರು ಮಾಡಿಸಿದ್ದೇನೆ. ಇದರಿಂದ ಗುಣಮಟ್ಟದ ಹಾಲು ಒಕ್ಕೂಟಕ್ಕೆ ಸರಬರಾಜಾಗುತ್ತಿದೆ ಎಂದು ಹೇಳಿದರು.</p>.<p>ರೈತರಿಗೆ ಅನುಕೂಲವಾಗುವ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವ ಕೆಲಸವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತು ನಾವು ಮಾಡುತ್ತಿದ್ದೇವೆ. ರೈತರು ಕೂಡ ಗುಣಮಟ್ಟದ ಹಾಲನ್ನು ಪೂರೈಕೆ ಮಾಡಿದರೆ ಒಕ್ಕೂಟ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ರೈತರು ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಮನ್ಮುಲ್ ಉಪ ವ್ಯವಸ್ಥಾಪಕ ಆರ್.ಪ್ರಸಾದ್, ಮಾರ್ಗ ವಿಸ್ತರಣಾಧಿಕಾರಿ ಎಚ್.ಎನ್. ಉಷಾ, ಕಾಂಗ್ರೆಸ್ ಮುಖಂಡರಾದ ಕೆ.ಕುಬೇರ, ಬಿ.ಕೆ.ಸ್ವಾಮಿ, ಸಿ.ಆರ್.ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾಂಡವಪುರ: ಪ್ರತಿ ಗ್ರಾಮದಲ್ಲಿ ಡೇರಿಯ ಬಿಎಂಸಿ ಕೇಂದ್ರಗಳನ್ನು ತೆರೆದರೆ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ ಮತ್ತು ಹೈನುಗಾರಿಕೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಾಂತಾಗುತ್ತದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.</p>.<p>ತಾಲ್ಲೂಕಿನ ಬಿಂಡಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ (ಡೇರಿ) ನೂತನವಾಗಿ ಪ್ರಾರಂಭಿಸಲಾಗಿರುವ ಬಿಎಂಸಿ ಕೇಂದ್ರವನ್ನು ಉದ್ಪಾಟಿಸಿ ಮಾತನಾಡಿದರು.</p>.<p>ಬಿಂಡಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮದ ರೈತರ ಅನುಕೂಲಕ್ಕಾಗಿ ಬಿಎಂಸಿ ಕೇಂದ್ರ ಪ್ರಾರಂಭಿಸಲಾಗಿದ್ದು, ಇದರಿಂದ ರೈತರು ಹೈನುಗಾರಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಹೈನುಗಾರಿಕೆ ಲಾಭದಾಯಕವಾಗಿದ್ದು, ರೈತರು ಜೀವನೋಪಾಯ ಮಾರ್ಗವಾಗಿ ಇದನ್ನು ಬಳಸಿಕೊಳ್ಳಬೇಕು ಎಂದರು.</p>.<p>ಮನ್ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಬಿಂಡಹಳ್ಳಿ ಗ್ರಾಮದಲ್ಲಿ 3 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ ಅಳವಡಿಕೆ ಮಾಡಲಾಗಿದೆ. ನಾನು ನಿರ್ದೇಶಕನಾದ ಮೇಲೆ ಚಿಕ್ಕಾಡೆ, ಕ್ಯಾತನಹಳ್ಳಿ, ಅರಳಕುಪ್ಪೆ, ಕೋಡಾಲ, ಎರೇಗೌಡನಹಳ್ಳಿ, ಕಡಬ, ನಾರಾಯಣಪುರ, ಚಿನಕುರಳಿ ಸೇರಿದಂತೆ 10 ಬಿಎಂಸಿ ಕೇಂದ್ರಗಳನ್ನು ಮಂಜೂರು ಮಾಡಿಸಿದ್ದೇನೆ. ಇದರಿಂದ ಗುಣಮಟ್ಟದ ಹಾಲು ಒಕ್ಕೂಟಕ್ಕೆ ಸರಬರಾಜಾಗುತ್ತಿದೆ ಎಂದು ಹೇಳಿದರು.</p>.<p>ರೈತರಿಗೆ ಅನುಕೂಲವಾಗುವ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವ ಕೆಲಸವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತು ನಾವು ಮಾಡುತ್ತಿದ್ದೇವೆ. ರೈತರು ಕೂಡ ಗುಣಮಟ್ಟದ ಹಾಲನ್ನು ಪೂರೈಕೆ ಮಾಡಿದರೆ ಒಕ್ಕೂಟ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ರೈತರು ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಮನ್ಮುಲ್ ಉಪ ವ್ಯವಸ್ಥಾಪಕ ಆರ್.ಪ್ರಸಾದ್, ಮಾರ್ಗ ವಿಸ್ತರಣಾಧಿಕಾರಿ ಎಚ್.ಎನ್. ಉಷಾ, ಕಾಂಗ್ರೆಸ್ ಮುಖಂಡರಾದ ಕೆ.ಕುಬೇರ, ಬಿ.ಕೆ.ಸ್ವಾಮಿ, ಸಿ.ಆರ್.ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>