<p><strong>ಮಂಡ್ಯ</strong>: ಕರ್ನಾಟಕ ಸಂಘದ ವತಿಯಿಂದ ಜಿ.ಎಸ್. ಬೊಮ್ಮೇಗೌಡ ಸಹಕಾರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಪಿ.ಲೋಕೇಶ್ ಚಂದಗಾಲು ತಿಳಿಸಿದರು.</p><p>ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, 2026ನೇ ಸಾಲಿನ ಜಿ.ಎಸ್.ಬೊಮ್ಮೇಗೌಡ ಸಹಕಾರ ಪ್ರಶಸ್ತಿಗೆ ಮೈಸೂರು ಜಿಲ್ಲೆಯ ಸಹಕಾರಿ ಮಹಿಳೆ ಕೆ.ಲಲಿತಾ ಅವರು ಆಯ್ಕೆಯಾಗಿದ್ದು, ಪ್ರಶಸ್ತಿ ಫಲಕದೊಂದಿಗೆ ₹25 ಸಾವಿರ ನಗದು ನೀಡಿ ಗೌರವಿಸಲಾಗುವುದು ಎಂದರು.</p><p>ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮೈಸೂರು ವಿ.ವಿ ಪ್ರಸಾರಾಂಗದ ವಿಶ್ರಾಂತ ನಿರ್ದೇಶಕ ಕೆ.ಟಿ. ವೀರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡುವರು. ಮಾಜಿ ಶಾಸಕ ಹಾಗೂ ದತ್ತಿದಾನಿ ಜಿ.ಬಿ. ಶಿವಕುಮಾರ್ ಉಪಸ್ಥಿತರಿರುವರು ಎಂದು ಹೇಳಿದರು.</p><p>ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶ್ಗೌಡ, ಮಾಜಿ ಶಾಸಕ ಜಿ.ಬಿ.ಶಿವಮಾರ್, ಜೆ.ರಾಜಶೇಖರ, ಸುರೇಶ್, ಉದಯ್ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕರ್ನಾಟಕ ಸಂಘದ ವತಿಯಿಂದ ಜಿ.ಎಸ್. ಬೊಮ್ಮೇಗೌಡ ಸಹಕಾರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಪಿ.ಲೋಕೇಶ್ ಚಂದಗಾಲು ತಿಳಿಸಿದರು.</p><p>ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, 2026ನೇ ಸಾಲಿನ ಜಿ.ಎಸ್.ಬೊಮ್ಮೇಗೌಡ ಸಹಕಾರ ಪ್ರಶಸ್ತಿಗೆ ಮೈಸೂರು ಜಿಲ್ಲೆಯ ಸಹಕಾರಿ ಮಹಿಳೆ ಕೆ.ಲಲಿತಾ ಅವರು ಆಯ್ಕೆಯಾಗಿದ್ದು, ಪ್ರಶಸ್ತಿ ಫಲಕದೊಂದಿಗೆ ₹25 ಸಾವಿರ ನಗದು ನೀಡಿ ಗೌರವಿಸಲಾಗುವುದು ಎಂದರು.</p><p>ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮೈಸೂರು ವಿ.ವಿ ಪ್ರಸಾರಾಂಗದ ವಿಶ್ರಾಂತ ನಿರ್ದೇಶಕ ಕೆ.ಟಿ. ವೀರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡುವರು. ಮಾಜಿ ಶಾಸಕ ಹಾಗೂ ದತ್ತಿದಾನಿ ಜಿ.ಬಿ. ಶಿವಕುಮಾರ್ ಉಪಸ್ಥಿತರಿರುವರು ಎಂದು ಹೇಳಿದರು.</p><p>ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶ್ಗೌಡ, ಮಾಜಿ ಶಾಸಕ ಜಿ.ಬಿ.ಶಿವಮಾರ್, ಜೆ.ರಾಜಶೇಖರ, ಸುರೇಶ್, ಉದಯ್ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>