<p><strong>ಕೆ.ಆರ್.ಪೇಟೆ:</strong> ತಾಲ್ಲೂಕಿನ ಬೂಕನಕೆರೆ ಗ್ರಾಮದ ಆಂಜನೇಯ ಸ್ವಾಮಿ ಜಯಂತ್ಯುತ್ಸವ ನಡೆಯಿತು.</p>.<p>ಉತ್ಸವದ ಅಂಗವಾಗಿ ಆಂಜನೇಯ ಸ್ವಾಮಿಗೆ ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ವಿಶೇಷ ಪೂಜೆ ನೆರವೇರಿಸಿ ಪ್ರಸಾದ ವಿನಿಯೋಗ ಮಾಡಲಾಯಿತು.</p>.<p>ಮಿತ್ರ ಫೌಂಡೇಷನ್ ಅಧ್ಯಕ್ಷ ಬೂಕನಕೆರೆ ವಿಜಯರಾಮೇಗೌಡ ಮಾತನಾಡಿ, ‘ಧಾರ್ಮಿಕ ಉತ್ಸವಗಳನ್ನು ನಡೆಸುವ ಮೂಲಕ ಗ್ರಾಮೀಣ ಯುವಕರು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು. ದೇವರ ಉತ್ಸವಗಳು ಮತ್ತು ಹಬ್ಬಗಳು ಯುವ ಸಮುದಾಯದಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುತ್ತವೆ’ ಎಂದರು.</p>.<p>‘ಸತ್ಯಪಥದಲ್ಲಿ ಸಾಗಿ, ಸಮಾಜಕ್ಕೆ ಒಳ್ಳೆಯದು ಮಾಡಬೇಕು ಎಂದು ಎಲ್ಲ ಧರ್ಮಗಳು ಹೇಳುತ್ತವೆ. ನಮ್ಮ ಸನಾತನ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಆಂಜನೇಯ ಯುವಕರ ಬಳಗದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ತಾಲ್ಲೂಕಿನ ಬೂಕನಕೆರೆ ಗ್ರಾಮದ ಆಂಜನೇಯ ಸ್ವಾಮಿ ಜಯಂತ್ಯುತ್ಸವ ನಡೆಯಿತು.</p>.<p>ಉತ್ಸವದ ಅಂಗವಾಗಿ ಆಂಜನೇಯ ಸ್ವಾಮಿಗೆ ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ವಿಶೇಷ ಪೂಜೆ ನೆರವೇರಿಸಿ ಪ್ರಸಾದ ವಿನಿಯೋಗ ಮಾಡಲಾಯಿತು.</p>.<p>ಮಿತ್ರ ಫೌಂಡೇಷನ್ ಅಧ್ಯಕ್ಷ ಬೂಕನಕೆರೆ ವಿಜಯರಾಮೇಗೌಡ ಮಾತನಾಡಿ, ‘ಧಾರ್ಮಿಕ ಉತ್ಸವಗಳನ್ನು ನಡೆಸುವ ಮೂಲಕ ಗ್ರಾಮೀಣ ಯುವಕರು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು. ದೇವರ ಉತ್ಸವಗಳು ಮತ್ತು ಹಬ್ಬಗಳು ಯುವ ಸಮುದಾಯದಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುತ್ತವೆ’ ಎಂದರು.</p>.<p>‘ಸತ್ಯಪಥದಲ್ಲಿ ಸಾಗಿ, ಸಮಾಜಕ್ಕೆ ಒಳ್ಳೆಯದು ಮಾಡಬೇಕು ಎಂದು ಎಲ್ಲ ಧರ್ಮಗಳು ಹೇಳುತ್ತವೆ. ನಮ್ಮ ಸನಾತನ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಆಂಜನೇಯ ಯುವಕರ ಬಳಗದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>